ರಾಜ್ಯ

ಉದಯಗಿರಿ ಪೊಲೀಸ್‌ ಠಾಣೆ ಕಲ್ಲು ತೂರಾಟ ಪ್ರಕರಣ:ಆರ್‌.ಅಶೋಕ್‌

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆಯ ಕಲ್ಲು ತೂರಾಟ ಪ್ರಕರಣವನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿ ಹೋಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ನಗರದ ಉದಯಗಿರಿ ಪೊಲೀಸ್‌ ಠಾಣೆಗೆ ಇಂದು(ಫೆಬ್ರವರಿ.11) ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪೊಲೀಸ್ ಅಧಿಕಾರಿಗಳ ಬಗ್ಗೆ ಬಹಳ ಕೆಟ್ಟದಾಗಿ ಸಚಿವ ಕೆ.ಎನ್‌.ರಾಜಣ್ಣ ಅವರು ಮಾತನಾಡಿದ್ದಾರೆ.  ರಾಜ್ಯದಲ್ಲಿ  ಪೊಲೀಸ್ ಇಲಾಖೆಯೇ ಸರಿ ಇಲ್ಲ ಎನ್ನುವುದಾದರೆ ಪೊಲೀಸ್‌ ಠಾಣೆ ಮುಚ್ಚಿ ಬಿಡಿ. ಇಂತಹ ಘಟನೆಯೇ ಹುಬ್ಬಳ್ಳಿಯಲ್ಲಿಯೂ ನಡೆದಾಗ ಸಿಎಂ ಸಿದ್ದರಾಮಯ್ಯ ಅವರೇ ಆರೋಪಿಗಳಿಗೆ ಖುಲಾಸೆ ಮಾಡಿ ಎಂದು ಧೈರ್ಯ ತುಂಬಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದೇ ಸಾಕ್ಷಿ ಎಂದು ವಾಗ್ದಾಳಿ ನಡೆಸಿದರು.

ಪೊಲೀಸರು, ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆ ತರದೆ ಕಾಂಗ್ರೆಸ್ ಅವರ ಅಪ್ಪನ ಮನೆಗಳಿಗೆ ಕರೆದುಕೊಂಡು ಹೋಗಬೇಕಿತ್ತಾ? ಉದಯಗಿರಿ ಏನೂ ಪಾಕಿಸ್ತಾನದಲ್ಲಿ ಇದೆಯಾ? ಅಥವಾ ಉದಯಗಿರಿಗೇ ಬೇರೆ ಕಾನೂನು ಇದೆಯಾ? ಆ ಮಂತ್ರಿಗೇನು ಕಾಮನ್ ಸೆನ್ಸ್ ಇಲ್ವಾ? ಈ ಪ್ರಕರಣದಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಕಾನೂನು ಉದಯಗಿರಿಗೆ ಅನ್ವಯ ಆಗಲ್ವಾ? ಸ್ವಲ್ಪ ಯಾಮಾರಿದ್ದರೆ ಪೊಲೀಸ್ ಠಾಣೆಯನ್ನೇ ಉಡೀಸ್ ಮಾಡಿ ಬಿಡುತ್ತಿದ್ದರು. ಈ ದೇಶದಲ್ಲಿ ಏನೇ ನಡೆದರು ಆರ್‌ಎಸ್‌ಎಸ್‌ ಕಾರಣನಾ? ಈ ಸರ್ಕಾರ ಬದುಕಿದೆಯಾ ಅಥವಾ ಸತ್ತು ಹೋಗಿದೆಯಾ ಗೊತ್ತಿಲ್ಲ ಎಂದು ಪ್ರಶ್ನಿಸಿದರು.

ಇನ್ನು ಗೃಹ ಸಚಿವರಿಗೆ ತಮ್ಮ ಇಲಾಖೆಯ ಬಗ್ಗೆಯೇ ಇಷ್ಟವಿಲ್ಲ. ಗೃಹ ಸಚಿವರಿಗೆ ಅವರದೇ ಇಲಾಖೆಯ ಮೇಲೆ ಆಸಕ್ತಿ ಇಲ್ಲ. ಒಟ್ಟಾರೆಯಾಗಿ ರಾಜ್ಯದಲ್ಲಿ ಸಂಪೂರ್ಣ ಕಾನೂನು ವ್ಯವಸ್ಥೆ ಹಾಳಾಗುರುವುದರಿಂದ ಈ ರಾಜ್ಯವನ್ನು ಆ ದೇವರೇ ಕಾಪಾಡಬೇಕು ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು ಉದಯಗಿರಿ ಪೊಲೀಸ್‌ ಠಾಣೆಯನ್ನು ಉಳಿಸುವ ಕೆಲಸ ಮಾಡಬೇಕು

ಸಿಎಂ ಸಿದ್ದರಾಮಯ್ಯ ಅವರು ಕೇವಲ ಆರು ತಿಂಗಳು ಮಾತ್ರ ಅಧಿಕಾರಲ್ಲಿರುತ್ತಾರೆ. ಆದರೆ ನಾನು ಈಗಾಗಲೇ ನವೆಂಬರ್‌ 15 ರವರೆಗೂ ಮಾತ್ರ ಅಧಿಕಾರದಲ್ಲಿ ಮುಂದುವರೆಯುತ್ತಾರೆ ಎಂದು ಹೇಳಿದ್ದೀನಿ. ಇನ್ನು ಸಿಎಂ ಸಿದ್ದರಾಮಯ್ಯ ನಿದ್ದೆರಾಮಯ್ಯ ಆಗುವುದನ್ನು ಬಿಟ್ಟು ಈಗಲಾದರೂ ಆಡಳಿತದತ್ತ ಗಮನಹರಿಸಬೇಕು. ನಿಮಗಿರುವ ನವೆಂಬರ್‌ವರೆಗಿನ ಅವಧಿಯಲ್ಲಾದರೂ‌ ಒಳ್ಳೆಯ ಕೆಲಸ ಮಾಡಬೇಕು. ಒಳಿತು ಮಾಡು ಮನುಷ್ಯ ನೀ ಇರೋದು ಮೂರೇ ದಿವಸ ಎನ್ನುವ ಹಾಗೇ ಉದಯಗಿರಿ ಪೊಲೀಸ್‌ ಠಾಣೆಯನ್ನು ಉಳಿಸುವ ಕೆಲಸ ಮಾಡಿ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

10 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

11 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

15 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

16 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

17 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

18 hours ago