ರಾಜ್ಯ

ಹಸು ಕೆಚ್ಚಲು ಕೊಯ್ದಿರುವ ವಿಚಾರ| ಸರ್ಕಾರ ಘಟನೆಯ ಹಿಂದಿರುವವರನ್ನು ಪತ್ತೆ ಹಚ್ಚಬೇಕು: ಆರ್‌.ಅಶೋಕ್‌ ಒತ್ತಾಯ

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿನ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆಯಲ್ಲಿ ಪೊಲೀಸರು, ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಆ ಘಟನೆಯ ಹಿಂದಿರುವವರನ್ನು ಸರ್ಕಾರ ಕೂಡಲೇ ಪತ್ತೆ ಹಚ್ಚಬೇಕು ಎಂದು ವಿರೋಧ ಪಕ್ಷ ನಾಯಕ ಆರ್.ಅಶೋಕ್‌ ಒತ್ತಾಯಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಜನವರಿ.13) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಂಕ್ರಾಂತಿ ಹಬ್ಬದ ಸಂದರ್ಭದಲ್ಲೇ, ಚಾಮರಾಜಪೇಟೆಯಲ್ಲಿನ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ. ಈ ಕಾರಣಕ್ಕೆ ಹಸುಗಳ ಕೆಚ್ಚಲು ಕೊಯ್ದಿದಿರುವ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಆದರೆ ಇದೀಗ ಪೊಲೀಸರು ಕಾಟಾಚಾರಕ್ಕಾಗಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧನಪಡಿಸಿರುವ ವ್ಯಕ್ತಿಯೂ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ. ಹೀಗಾಗಿ ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಆಗ್ರಹಿಸಿದರು.

ಈ ಘಟನೆ ನಡೆದ ಸ್ಥಳದಲ್ಲಿ ಪಶು ಆಸ್ಪತ್ರೆಯ ಸ್ಥಳವಿದ್ದು, ಅದನ್ನು ವಕ್ಫ್‌ ಬೋರ್ಡ್‌ ಮಂಡಳಿಗೆ ನೀಡಲು ಪ್ರಯತ್ನ ನಡೆದಿತ್ತು. ಈ ಸ್ಥಳವೂ ಸುಮಾರು 500 ಕೋಟಿ ರೂ. ಬೆಲೆಬಾಳುವ ಆಸ್ತಿಯಾಗಿದ್ದು, ಇದನ್ನುಲೂಟಿ ಮಾಡಲು ನಕಲಿ ದಾಖಲೆಗಳನ್ನು ಸರ್ಕಾರ ಸೃಷ್ಟಿ ಮಾಡಿತ್ತು. ಆದರೆ ಆ ವೇಳೆ ಆರ್‌ಎಸ್‌ಎಸ್‌ ಕಾರ್ಯಕರ್ತ ಕರ್ಣ ಎಂಬುವವರು ವಕ್ಫ್‌ ಬೋರ್ಡ್‌ ಮಂಡಳಿ ವಿರುದ್ಧ ಹೋರಾಟ ಮಾಡಿದರು. ಹೀಗಾಗಿ ಅವರ ಮೇಲೆ ಸೇಡು ತೀರಿಸಿಕೊಳ್ಳಲು ದುಷ್ಕರ್ಮಿಗಳು ಹಸುಗಳ ಕೆಚ್ಚಲು ಕೊಯ್ದಿದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನೂ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಹಸುಗಳನ್ನು ನೀಡುವುದರಿಂದ ಪರಿಹಾರ ಸಿಗುವುದಿಲ್ಲ. ಅದರ ಬದಲಾಗಿ ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ನಡೆಸಬೇಕು. ತನಿಖೆ ನಡೆಸಿದರೆ ಮಾತ್ರ ನಿಜವಾದ ತಪ್ಪಿಸ್ಥರಿಗೆ ಶಿಕ್ಷೆಯಾಗುತ್ತದೆ. ಆಗ ಮಾತ್ರ ಈ ಘಟನೆಗೆ ನ್ಯಾಯ ದೊರಕಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ಅರ್ಚನ ಎಸ್‌ ಎಸ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

1 hour ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago