ರಾಜ್ಯ

ನಾವು ರಾಜ್ಯಪಾಲರ ಮೊರೆ ಹೋಗುತ್ತೇವೆ ಎಂದ ಆರ್.‌ಅಶೋಕ್:‌ ಕಾರಣ ಇಷ್ಟೇ

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್‍ನಲ್ಲಿ ನಾಯಕತ್ವ ಬದಲಾವಣೆ, ಕುರ್ಚಿ ಕದನ, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಅನಿವಾರ್ಯವಾಗಿ ನಾವು ರಾಜ್ಯಪಾಲರ ಮೊರೆ ಹೋಗುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಬನಶಂಕರಿಯ 2ನೇ ಹಂತದ ಶಾಸಕರ ಕಚೇರಿಯಲ್ಲಿ ಹಮಿಕೊಂಡಿದ್ದ 150 ವರ್ಷಗಳ ವಂದೇ ಮಾತರಂ ಸಂಭ್ರಮಾಚರಣೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಕಾದು ನೋಡುತ್ತಿದ್ದೇವೆ. ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಅಧಿಕಾರಿಗಳು ಯಾರ ಮಾತು ಕೇಳುತ್ತಿಲ್ಲ. ಜನರ ಗೋಳು ಕೇಳುವವರೇ ಇಲ್ಲದಂತಾಗಿದೆ. ಮೂರು ದಿನದೊಳಗೆ ಸರಿ ಹೋಗದಿದ್ದರೆ ರಾಜ್ಯಪಾಲರಿಗೆ ದೂರು ಕೊಡುತ್ತೇವೆ ಎಂದು ಹೇಳಿದರು.

ಯಾವುದೇ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಹೈಕಮಾಂಡ್‍ಗೆ ಭಯವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡುವುದಿಲ್ಲ. ಹಾಗಂತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುಮ್ಮನಿರುವುದಿಲ್ಲ. ಒಂದು ವೇಳೆ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಮುಳುಗಿ ಅರಾಜಕತೆ ಸೃಷ್ಟಿಯಾಗುತ್ತದೆ ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ಸ್ಥಾನ ಸಿಗದಿದ್ದರೆ ಡಿಕೆಶಿ ಸುಮನಿರುವುದಿಲ್ಲ. ಇದು ಕಾಂಗ್ರೆಸ್‍ಗೆ ಪಾಲಿಗೆ ಉಗುಳಲು ಆಗದ, ನುಂಗಲು ಆಗದ ಬಿಸಿ ತುಪ್ಪವಾಗಿದೆ. ಸಿದ್ದರಾಮಯ್ಯ ವಲಸೆ ಬಂದವರು. ಕೊಟ್ಟಿರುವ ಅಧಿಕಾರ ಸಾಕು. ನನಗೆ ಕೊಡಿ ಎಂದು ಡಿಸಿಎಂ ಕೇಳುತ್ತಿದ್ದಾರೆ. ಸಿದ್ದರಾಮಯ್ಯ ವಚನಭ್ರಷ್ಟ ಎಂದು ಡಿ.ಕೆ.ಸುರೇಶ್ ಹೇಳುತ್ತಿದ್ದಾರೆ. ವಚನಭ್ರಷ್ಟ ಎಂಬುದು ಸಿಎಂಗೆ ಕಾಂಗ್ರೆಸ್ ನಾಯಕರು ಕೊಟ್ಟಿರುವ ಟೈಟಲ್ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಸಂಪೂರ್ಣ ಗೊಂದಲಮಯ ವಾತಾವರಣವಿದೆ. ಸರ್ಕಾರ ಸತ್ತು ಹೋಗಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಅಧಿಕಾರಿಗಳ ಮಾತು ಕೇಳುತ್ತಿಲ್ಲ. ಗೊಂದಲ ಬಗೆಹರಿಸದಿದ್ದರೆ ಪಕ್ಷ ಕ್ಷೀಣಿಸುತ್ತದೆ ಎಂದು ಶಾಸಕ ಬಾಲಕೃಷ್ಣ ಹೇಳುತ್ತಿದ್ದಾರೆ. ಸರ್ಕಾರ ಐಸಿಯುನಲ್ಲಿದೆ ಎಂದು ವ್ಯಂಗ್ಯವಾಡಿದರು.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

30 mins ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

36 mins ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

3 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

4 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

4 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

4 hours ago