ರಾಜ್ಯ

ನಾವು ರಾಜ್ಯಪಾಲರ ಮೊರೆ ಹೋಗುತ್ತೇವೆ ಎಂದ ಆರ್.‌ಅಶೋಕ್:‌ ಕಾರಣ ಇಷ್ಟೇ

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್‍ನಲ್ಲಿ ನಾಯಕತ್ವ ಬದಲಾವಣೆ, ಕುರ್ಚಿ ಕದನ, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಅನಿವಾರ್ಯವಾಗಿ ನಾವು ರಾಜ್ಯಪಾಲರ ಮೊರೆ ಹೋಗುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಬನಶಂಕರಿಯ 2ನೇ ಹಂತದ ಶಾಸಕರ ಕಚೇರಿಯಲ್ಲಿ ಹಮಿಕೊಂಡಿದ್ದ 150 ವರ್ಷಗಳ ವಂದೇ ಮಾತರಂ ಸಂಭ್ರಮಾಚರಣೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಕಾದು ನೋಡುತ್ತಿದ್ದೇವೆ. ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಅಧಿಕಾರಿಗಳು ಯಾರ ಮಾತು ಕೇಳುತ್ತಿಲ್ಲ. ಜನರ ಗೋಳು ಕೇಳುವವರೇ ಇಲ್ಲದಂತಾಗಿದೆ. ಮೂರು ದಿನದೊಳಗೆ ಸರಿ ಹೋಗದಿದ್ದರೆ ರಾಜ್ಯಪಾಲರಿಗೆ ದೂರು ಕೊಡುತ್ತೇವೆ ಎಂದು ಹೇಳಿದರು.

ಯಾವುದೇ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಹೈಕಮಾಂಡ್‍ಗೆ ಭಯವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡುವುದಿಲ್ಲ. ಹಾಗಂತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುಮ್ಮನಿರುವುದಿಲ್ಲ. ಒಂದು ವೇಳೆ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಮುಳುಗಿ ಅರಾಜಕತೆ ಸೃಷ್ಟಿಯಾಗುತ್ತದೆ ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ಸ್ಥಾನ ಸಿಗದಿದ್ದರೆ ಡಿಕೆಶಿ ಸುಮನಿರುವುದಿಲ್ಲ. ಇದು ಕಾಂಗ್ರೆಸ್‍ಗೆ ಪಾಲಿಗೆ ಉಗುಳಲು ಆಗದ, ನುಂಗಲು ಆಗದ ಬಿಸಿ ತುಪ್ಪವಾಗಿದೆ. ಸಿದ್ದರಾಮಯ್ಯ ವಲಸೆ ಬಂದವರು. ಕೊಟ್ಟಿರುವ ಅಧಿಕಾರ ಸಾಕು. ನನಗೆ ಕೊಡಿ ಎಂದು ಡಿಸಿಎಂ ಕೇಳುತ್ತಿದ್ದಾರೆ. ಸಿದ್ದರಾಮಯ್ಯ ವಚನಭ್ರಷ್ಟ ಎಂದು ಡಿ.ಕೆ.ಸುರೇಶ್ ಹೇಳುತ್ತಿದ್ದಾರೆ. ವಚನಭ್ರಷ್ಟ ಎಂಬುದು ಸಿಎಂಗೆ ಕಾಂಗ್ರೆಸ್ ನಾಯಕರು ಕೊಟ್ಟಿರುವ ಟೈಟಲ್ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಸಂಪೂರ್ಣ ಗೊಂದಲಮಯ ವಾತಾವರಣವಿದೆ. ಸರ್ಕಾರ ಸತ್ತು ಹೋಗಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಅಧಿಕಾರಿಗಳ ಮಾತು ಕೇಳುತ್ತಿಲ್ಲ. ಗೊಂದಲ ಬಗೆಹರಿಸದಿದ್ದರೆ ಪಕ್ಷ ಕ್ಷೀಣಿಸುತ್ತದೆ ಎಂದು ಶಾಸಕ ಬಾಲಕೃಷ್ಣ ಹೇಳುತ್ತಿದ್ದಾರೆ. ಸರ್ಕಾರ ಐಸಿಯುನಲ್ಲಿದೆ ಎಂದು ವ್ಯಂಗ್ಯವಾಡಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

1 hour ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago