ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶನಿವಾರ(ಮಾರ್ಚ್.1) ನಡೆದ ಬೆಂಗಳೂರು ಚಲನಚಿತ್ರೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಸಿನಿಮಾರಂಗದ ನಟ, ನಟಿಯರಿಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದರು. ಆದರೆ ಇದೀಗ ಡಿಕೆಶಿ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಕಿವಿಮಾತು ಹೇಳಿದ್ದಾರೆ.
ಸಮಾಜದಲ್ಲಿ ಎಲ್ಲರೂ ತಮಗೆ ಮತ್ತು ತಮ್ಮ ಪಕ್ಷಕ್ಕೆ ಸೆಲ್ಯೂಟ್ ಹೊಡೆದು, ತಮ್ಮ ಅಡಿಯಾಳುಗಳಂತೆ ನಡೆದುಕೊಳ್ಳಬೇಕು ಎನ್ನುವ ಕೆಟ್ಟ ಮನಸ್ಥಿತಿಯಿಂದ ಹೊರಗೆ ಬನ್ನಿ. ಕಲಾವಿದರು ಯಾರ ಸ್ವತ್ತೂ ಅಲ್ಲ. ಕಲಾವಿದರಿಗೆ ಅವರ ವಿವೇಚನೆಗೆ ತಕ್ಕಂತೆ ನಡೆದುಕೊಳ್ಳುವ, ಯಾರ ಜೊತೆ ಬೇಕಾದರೂ ಗುರುತಿಸಿಕೊಳ್ಳುವ ಅಥವಾ ಗುರುತಿಸಿಕೊಳ್ಳದಿರುವ ಸ್ವಾತಂತ್ರ್ಯ ಮತ್ತು ಹಕ್ಕಿದೆ ಎಂದು ತಿರುಗೇಟು ನೀಡಿದ್ದಾರೆ.
ಕಲಾವಿದರು ನಿಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ. ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿ ಕಲಾವಿದರನ್ನು ನಡೆಸಿಕೊಳ್ಳಬೇಡಿ. ಕಲಾವಿದರಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…