ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶನಿವಾರ(ಮಾರ್ಚ್.1) ನಡೆದ ಬೆಂಗಳೂರು ಚಲನಚಿತ್ರೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಸಿನಿಮಾರಂಗದ ನಟ, ನಟಿಯರಿಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದರು. ಆದರೆ ಇದೀಗ ಡಿಕೆಶಿ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಕಿವಿಮಾತು ಹೇಳಿದ್ದಾರೆ.
ಸಮಾಜದಲ್ಲಿ ಎಲ್ಲರೂ ತಮಗೆ ಮತ್ತು ತಮ್ಮ ಪಕ್ಷಕ್ಕೆ ಸೆಲ್ಯೂಟ್ ಹೊಡೆದು, ತಮ್ಮ ಅಡಿಯಾಳುಗಳಂತೆ ನಡೆದುಕೊಳ್ಳಬೇಕು ಎನ್ನುವ ಕೆಟ್ಟ ಮನಸ್ಥಿತಿಯಿಂದ ಹೊರಗೆ ಬನ್ನಿ. ಕಲಾವಿದರು ಯಾರ ಸ್ವತ್ತೂ ಅಲ್ಲ. ಕಲಾವಿದರಿಗೆ ಅವರ ವಿವೇಚನೆಗೆ ತಕ್ಕಂತೆ ನಡೆದುಕೊಳ್ಳುವ, ಯಾರ ಜೊತೆ ಬೇಕಾದರೂ ಗುರುತಿಸಿಕೊಳ್ಳುವ ಅಥವಾ ಗುರುತಿಸಿಕೊಳ್ಳದಿರುವ ಸ್ವಾತಂತ್ರ್ಯ ಮತ್ತು ಹಕ್ಕಿದೆ ಎಂದು ತಿರುಗೇಟು ನೀಡಿದ್ದಾರೆ.
ಕಲಾವಿದರು ನಿಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ. ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿ ಕಲಾವಿದರನ್ನು ನಡೆಸಿಕೊಳ್ಳಬೇಡಿ. ಕಲಾವಿದರಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…