ಬೆಂಗಳೂರು: ಕೆಪಿಎಸ್ಸಿಯೂ ನಡೆಸಿದ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪುಗಳಿರುವ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಿ, ಹೊಸದಾಗಿ ಅಧಿಸೂಚನೆ ಹೊರಡಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು.
ವಿಧಾನಸೌಧದ ಬಜೆಟ್ ಅಧಿವೇಶನದಲ್ಲಿ ಇಂದು(ಮಾರ್ಚ್.4) ಈ ಕುರಿತು ನಿಯಮ 69ರ ಅಡಿಯಲ್ಲಿ ಭೋಜನ ವಿರಾಮದ ಬಳಿಕ ಮಾತನಾಡಿದ ಅವರು, ವಯಸ್ಸಿನ ಮಿತಿ ನಿರ್ಬಂಧ ಸಡಿಲಿಸಿ ಅರ್ಜಿ ಸಲ್ಲಿಸಿದ್ದ ಎಲ್ಲ 2.30 ಲಕ್ಷ ಅಭ್ಯರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಗೂಗಲ್ ಭಾಷಾಂತರದ ಮೂಲಕ ಕನ್ನಡಕ್ಕೆ ಅಪಮಾನ ಮಾಡಿರುವ ಅಧಿಕಾರಿಗೆ ಭಾಷಾನೀತಿ ಅವಹೇಳನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಬೇಜವಾಬ್ದಾರಿ ಹಾಗೂ ಹೊಣೆಗಾರಿಕೆ ಮರೆತು ಕಾರ್ಯ ನಿರ್ವಹಿಸಿರುವ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ಅವರ ವಿರುದ್ಧ ವಿಚಾರನೇಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.
ಇನ್ನು ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಗೆ ಖರ್ಚಾಗಿರುವ 25 ಕೋಟಿ ರೂ.ಗಳಿಗೂ ಹೆಚ್ಚಾಗಿರುವ ಹಣದ ನಷ್ಟವನ್ನು ತಪ್ಪಿತಸ್ಥರಿಂದಲೇ ವಸೂಲಿ ಮಾಡಬೇಕು. ಪದೇ ಪದೇ ಪ್ರಶ್ನೆಪತ್ರಿಕೆ ಗೊಂದಲ ಆಗದಂತೆ ಎಚ್ಚರವಹಿಸಲು ಯುಪಿಎಸ್ಸಿ ಮಾದರಿ ಅಳವಡಿಸಿಕೊಳ್ಳಲು ಸೂಚನೆ ನೀಡಬೇಕು. ಅಲ್ಲದೇ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಹಾಗೂ ಎಇಇ ಹುದ್ದೆಗಳ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಗುವಹಾಟಿ : ಆರಂಭದಲ್ಲಿ ಬೌಲರ್ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…