ರಾಜ್ಯ

ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆ ರದ್ದು ಮಾಡಿ, ಹೊಸ ಅಧಿಸೂಚನೆ ಹೊರಡಿಸಿ: ಆರ್‌.ಅಶೋಕ್‌

ಬೆಂಗಳೂರು: ಕೆಪಿಎಸ್‌ಸಿಯೂ ನಡೆಸಿದ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪುಗಳಿರುವ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಿ, ಹೊಸದಾಗಿ ಅಧಿಸೂಚನೆ ಹೊರಡಿಸಬೇಕು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದರು.

ವಿಧಾನಸೌಧದ ಬಜೆಟ್‌ ಅಧಿವೇಶನದಲ್ಲಿ ಇಂದು(ಮಾರ್ಚ್.4) ಈ ಕುರಿತು ನಿಯಮ 69ರ ಅಡಿಯಲ್ಲಿ ಭೋಜನ ವಿರಾಮದ ಬಳಿಕ ಮಾತನಾಡಿದ ಅವರು, ವಯಸ್ಸಿನ ಮಿತಿ ನಿರ್ಬಂಧ ಸಡಿಲಿಸಿ ಅರ್ಜಿ ಸಲ್ಲಿಸಿದ್ದ ಎಲ್ಲ 2.30 ಲಕ್ಷ ಅಭ್ಯರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಗೂಗಲ್ ಭಾಷಾಂತರದ ಮೂಲಕ ಕನ್ನಡಕ್ಕೆ ಅಪಮಾನ ಮಾಡಿರುವ ಅಧಿಕಾರಿಗೆ ಭಾಷಾನೀತಿ ಅವಹೇಳನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಬೇಜವಾಬ್ದಾರಿ ಹಾಗೂ ಹೊಣೆಗಾರಿಕೆ ಮರೆತು ಕಾರ್ಯ ನಿರ್ವಹಿಸಿರುವ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ಅವರ ವಿರುದ್ಧ ವಿಚಾರನೇಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.

ಇನ್ನು ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಗೆ ಖರ್ಚಾಗಿರುವ 25 ಕೋಟಿ ರೂ.ಗಳಿಗೂ ಹೆಚ್ಚಾಗಿರುವ ಹಣದ ನಷ್ಟವನ್ನು ತಪ್ಪಿತಸ್ಥರಿಂದಲೇ ವಸೂಲಿ ಮಾಡಬೇಕು. ಪದೇ ಪದೇ ಪ್ರಶ್ನೆಪತ್ರಿಕೆ ಗೊಂದಲ ಆಗದಂತೆ ಎಚ್ಚರವಹಿಸಲು ಯುಪಿಎಸ್‌ಸಿ ಮಾದರಿ ಅಳವಡಿಸಿಕೊಳ್ಳಲು ಸೂಚನೆ ನೀಡಬೇಕು. ಅಲ್ಲದೇ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್‌ಪೆಕ್ಟ‌ರ್ ಹಾಗೂ ಎಇಇ ಹುದ್ದೆಗಳ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಅರ್ಚನ ಎಸ್‌ ಎಸ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

57 mins ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

1 hour ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

1 hour ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

1 hour ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

1 hour ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

1 hour ago