ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಸುಮಾರು ಒಂದು ಸಾವಿರ ಕೋಟಿ ರೂ. ಸಾಲ ಮಾಡಿದ್ದು, ಸಾಲದ ಚಾಂಪಿಯನ್ ರಾಮಯ್ಯ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಇಂದು(ಮಾರ್ಚ್.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಸರ್ಕಾರ ದಲಿತರ ಹಣ ಲೂಟಿ ಮಾಡಿದ್ದು, ಗ್ಯಾರಂಟಿಗಾಗಿ ದಲಿತರ ಹಣ ಬಳಸಲಾಗಿದೆ. ನಾನು ಸಿದ್ದಣ್ಣ ಲೂಟಿ ಗ್ಯಾರಂಟಿಯ ಅಣ್ಣ ಎಂಬಂತಾಗಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ಭಿಕ್ಷೆ ಬೇಡೋ ಸ್ಥಿತಿಗೆ ಬಂದಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.
ರಾಜ್ಯದಲ್ಲಿ ಇದುವರೆಗೂ ಯಾವ ಮುಖ್ಯಮಂತ್ರಿಯೂ ಒಂದು ಸಾವಿರ ಕೋಟಿ ರೂ. ಅಷ್ಟು ಸಾಲ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಹೀಗಾಗಿಯೇ ಸಿದ್ದರಾಮಯ್ಯ ಅವರನ್ನು ಲೂಟಿ ರಾಮಯ್ಯ ಎಂದು ಕರೆಯುವುದು ಎಂದು ಕಿಡಿಕಾರಿದರು.





