ರಾಜ್ಯ

ಕಾಂಗ್ರೆಸ್‌ ಸರ್ಕಾರ ರಾಜ್ಯಪಾಲರಿಂದ ಸುಳ್ಳು ಹೇಳಿಸಿ ಜನರ ದಿಕ್ಕೂ ತಪ್ಪಿಸಿದೆ: ಆರ್‌.ಅಶೋಕ್‌

ಬೆಂಗಳೂರು: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣದಲ್ಲಿ ಕಾಂಗ್ರೆಸ್‌ ಸರ್ಕಾರ ರಾಜ್ಯಪಾಲರಿಂದ ಸುಳ್ಳು ಹೇಳಿಸಿ, ಅವರ ದಾರಿ ತಪ್ಪಿಸಿದ್ದಲ್ಲದೆ ನಾಡಿನ ಜನತೆಯೇ ದಿಕ್ಕೂನ್ನು ತಪ್ಪಿಸಿದೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಾಮಾನ್ಯವಾಗಿ ರಾಜ್ಯಪಾಲರ ಭಾಷಣ ಸರ್ಕಾರದ ಒಂದು ವರ್ಷದ ಸಾಧನೆ ಮತ್ತು ಮುಂದಿನ ವರ್ಷಕ್ಕೆ ಇರಬೇಕಾದ ಮುನ್ನೋಟದ ಗುರಿಗಳನ್ನು ಒಳಗೊಂಡಿರುತ್ತದೆ. ಆದರೆ ಈ ಕಾಂಗ್ರೆಸ್‌ ಸರ್ಕಾರ ಕಳೆದ ಒಂದು ವರ್ಷದಿಂದ ಏನನ್ನೂ ಮಾಡಿಲ್ಲ, ಮುಂದೆ ಏನನ್ನಾದರೂ ಮಾಡಲು ಯಾವ ದೂರದೃಷ್ಟಿಯೂ ಹೊಂದಿಲ್ಲ ಎಂಬುದಕ್ಕೆ ರಾಜ್ಯಪಾಲರ ಭಾಷಣವೇ ಸಾಕ್ಷಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದ ಮೂಲಕ ಸುಳ್ಳು ಹೇಳಿಸಿ, ಅವರ ದಾರಿ ತಪ್ಪಿಸಿದ್ದಲ್ಲದೆ ನಾಡಿನ ಜನರ ದಿಕ್ಕನ್ನೂ ತಪ್ಪಿಸಿದೆ. ರಾಜ್ಯಪಾಲರ ಭಾಷಣ ಕೇಳಿದರೆ ಈ ಸರ್ಕಾರಕ್ಕೆ ಯಾವ ಗೊತ್ತು ಗುರಿಯಿಲ್ಲ ಎಂಬುದಂತು ಸ್ಪಷ್ಟ. ಅಲ್ಲದೇ ಕನ್ನಡಿಗರನ್ನು ಸಾಲದ ಪ್ರಪಾತಕ್ಕೆ ತಳ್ಳಿದ್ದರ ಬಗ್ಗೆ ಇಂದಿನ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪವೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಕೆಲವು ಯೋಜನೆಗಳನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ತನ್ನ ಯೋಜನೆಗಳು ಎಂದು ಬಿಂಬಿಸಿಕೊಂಡಿರುವುದೇ ದೊಡ್ಡ ಸಾಧನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾವುದೇ ಸರ್ಕಾರಕ್ಕೆ ಪ್ರಮುಖವಾಗಿ ಎರಡು ಆದ್ಯತೆಗಳಿರುತ್ತವೆ. ಒಂದು ಜನಕಲ್ಯಾಣ ಮತ್ತೊಂದು ಅಭಿವೃದ್ಧಿ. ಆದರೆ ಕಾಂಗ್ರೆಸ್ ಸರ್ಕಾರ ಇವೆರಡರ ನಡುವೆ ಸಮತೋಲನ ಸಾಧಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಒಟ್ಟಿನಲ್ಲಿ ನಾನು ನನ್ನ ರಾಜಕೀಯ ಜೀವನದಲ್ಲೇ ಇಷ್ಟೊಂದು ನಿಸ್ಸಾರವಾದ ರಾಜ್ಯಪಾಲರ ಭಾಷಣವನ್ನು ಎಂದೂ ಕೇಳಿರಲಿಲ್ಲ. ಏನನ್ನೂ ಮಾಡದ, ಮಾಡಲಾಗದ ಸರ್ಕಾರವನ್ನು ಆರಿಸಿ ಕಳುಹಿಸಿದ್ದು ಈ ನಾಡಿನ ದೌರ್ಭಾಗ್ಯ ಎಂಬುದು ರಾಜ್ಯಪಾಲರ ಭಾಷಣದಿಂದ ರಾಜ್ಯದ ಜನರಿಗೆ ಇಂದು ಮನವರಿಕೆಯಾಗಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

4 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

5 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

5 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

5 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

5 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

6 hours ago