ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಭಿವೃದ್ಧಿಯಾಗಿದೆಯೇ ಹೊರತು, ರಾಜ್ಯ ಅಭಿವೃದ್ಧಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ವಿಧಾನಸೌಧದಲ್ಲಿ ಇಂದು(ಮಾರ್ಚ್.3) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಸಾಧನೆ ಬಗ್ಗೆ ವಿವರಿಸಿದ್ದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆರ್.ಅಶೋಕ್ ಅವರು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಆದರೆ ಕಾಂಗ್ರೆಸ್ ಅಭಿವೃದ್ಧಿಯಾಗಿದೆ. ಈ ಹಿಂದೆ ರಾಜ್ಯಪಾಲರನ್ನು ಕಾಂಗ್ರೆಸ್ಸಿಗರು ಹಿಯಾಳಿಸಿದ್ದರು. ಇದೀಗ ಅವರಿಂದಲೇ ಸರ್ಕಾರದ ಸಾಧನೆ ಬಗ್ಗೆ ಭಾಷಣ ಮಾಡಿಸಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರ ಕೈಗೆಟುಕುವ ದರದಲ್ಲೇ ಆರೋಗ್ಯ ಸೇವೆ ಎಂದಿದ್ದರು. ಆದರೆ ರಾಜ್ಯದಲ್ಲಿ ಬಡವರಿಗೆ ಎಲ್ಲಿ ಆರೋಗ್ಯ ಸೇವೆ ಸಿಗುತ್ತಿದೆ. ಅಲ್ಲದೇ ಎಸ್ಸಿ ಮತ್ತು ಎಸ್ಟಿ ಹಣ ದುರುಪಯೋಗವಾಗುತ್ತದೆ. ಸರ್ಕಾರದವರು ಯಾವ ನೀರಾವರಿ ಯೋಜನೆ ಮಾಡಿದ್ದಾರೆ. ಇನ್ನು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸರಿಯಾಗಿದೆ ಎಂದು ಭಾಷಣ ಮಾಡಿಸಿದ್ದಾರೆ. ಆದರೆ ಮೈಸೂರಿನ ಉಪಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಹಾಗೂ ರಾಜ್ಯಾದ್ಯಂತ ಹಲವೆಡೆಯ ಎಟಿಎಂಗಳಲ್ಲಿ ಕಳ್ಳತನವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…