ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಭಿವೃದ್ಧಿಯಾಗಿದೆಯೇ ಹೊರತು, ರಾಜ್ಯ ಅಭಿವೃದ್ಧಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ವಿಧಾನಸೌಧದಲ್ಲಿ ಇಂದು(ಮಾರ್ಚ್.3) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಸಾಧನೆ ಬಗ್ಗೆ ವಿವರಿಸಿದ್ದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆರ್.ಅಶೋಕ್ ಅವರು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಆದರೆ ಕಾಂಗ್ರೆಸ್ ಅಭಿವೃದ್ಧಿಯಾಗಿದೆ. ಈ ಹಿಂದೆ ರಾಜ್ಯಪಾಲರನ್ನು ಕಾಂಗ್ರೆಸ್ಸಿಗರು ಹಿಯಾಳಿಸಿದ್ದರು. ಇದೀಗ ಅವರಿಂದಲೇ ಸರ್ಕಾರದ ಸಾಧನೆ ಬಗ್ಗೆ ಭಾಷಣ ಮಾಡಿಸಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರ ಕೈಗೆಟುಕುವ ದರದಲ್ಲೇ ಆರೋಗ್ಯ ಸೇವೆ ಎಂದಿದ್ದರು. ಆದರೆ ರಾಜ್ಯದಲ್ಲಿ ಬಡವರಿಗೆ ಎಲ್ಲಿ ಆರೋಗ್ಯ ಸೇವೆ ಸಿಗುತ್ತಿದೆ. ಅಲ್ಲದೇ ಎಸ್ಸಿ ಮತ್ತು ಎಸ್ಟಿ ಹಣ ದುರುಪಯೋಗವಾಗುತ್ತದೆ. ಸರ್ಕಾರದವರು ಯಾವ ನೀರಾವರಿ ಯೋಜನೆ ಮಾಡಿದ್ದಾರೆ. ಇನ್ನು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸರಿಯಾಗಿದೆ ಎಂದು ಭಾಷಣ ಮಾಡಿಸಿದ್ದಾರೆ. ಆದರೆ ಮೈಸೂರಿನ ಉಪಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಹಾಗೂ ರಾಜ್ಯಾದ್ಯಂತ ಹಲವೆಡೆಯ ಎಟಿಎಂಗಳಲ್ಲಿ ಕಳ್ಳತನವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…