ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಭಿವೃದ್ಧಿಯಾಗಿದೆಯೇ ಹೊರತು, ರಾಜ್ಯ ಅಭಿವೃದ್ಧಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ವಿಧಾನಸೌಧದಲ್ಲಿ ಇಂದು(ಮಾರ್ಚ್.3) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಸಾಧನೆ ಬಗ್ಗೆ ವಿವರಿಸಿದ್ದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆರ್.ಅಶೋಕ್ ಅವರು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಆದರೆ ಕಾಂಗ್ರೆಸ್ ಅಭಿವೃದ್ಧಿಯಾಗಿದೆ. ಈ ಹಿಂದೆ ರಾಜ್ಯಪಾಲರನ್ನು ಕಾಂಗ್ರೆಸ್ಸಿಗರು ಹಿಯಾಳಿಸಿದ್ದರು. ಇದೀಗ ಅವರಿಂದಲೇ ಸರ್ಕಾರದ ಸಾಧನೆ ಬಗ್ಗೆ ಭಾಷಣ ಮಾಡಿಸಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರ ಕೈಗೆಟುಕುವ ದರದಲ್ಲೇ ಆರೋಗ್ಯ ಸೇವೆ ಎಂದಿದ್ದರು. ಆದರೆ ರಾಜ್ಯದಲ್ಲಿ ಬಡವರಿಗೆ ಎಲ್ಲಿ ಆರೋಗ್ಯ ಸೇವೆ ಸಿಗುತ್ತಿದೆ. ಅಲ್ಲದೇ ಎಸ್ಸಿ ಮತ್ತು ಎಸ್ಟಿ ಹಣ ದುರುಪಯೋಗವಾಗುತ್ತದೆ. ಸರ್ಕಾರದವರು ಯಾವ ನೀರಾವರಿ ಯೋಜನೆ ಮಾಡಿದ್ದಾರೆ. ಇನ್ನು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸರಿಯಾಗಿದೆ ಎಂದು ಭಾಷಣ ಮಾಡಿಸಿದ್ದಾರೆ. ಆದರೆ ಮೈಸೂರಿನ ಉಪಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಹಾಗೂ ರಾಜ್ಯಾದ್ಯಂತ ಹಲವೆಡೆಯ ಎಟಿಎಂಗಳಲ್ಲಿ ಕಳ್ಳತನವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…