ಬೆಂಗಳೂರು: ಮಾಜಿ ಸಿಎಂ ವೀರಪ್ಪ ಮೋಯ್ಲಿ ಅವರು ಭಾನುವಾರ ಕಾರ್ಯಕ್ರಮವೊಂದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಗೋದನ್ನು ಯಾರಿಂದಲೂ ತಪ್ಪಿಸಲು ಆಗಲ್ಲವೆಂದು ಹೇಳಿಕೆ ನೀಡಿದ್ದರು. ಆ ವೇಳೆ ಡಿಕೆಶಿ ಮುಖದಲ್ಲಿ ಖುಷಿ ಅರಳಿತ್ತು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಸಹ ವಿಡಿಯೋ ಮೂಲಕ ಮೊಯ್ಲಿಯವರ ಅಬ್ಬರದ ಭಾಷಣ ನೋಡಿದೆ. ಆ ಭಾಷಣದಲ್ಲಿ ವೀರಪ್ಪ ಮೊಯ್ಲಿ ಅವರು ಡಿಕೆಶಿ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಆಗಲ್ಲವೆಂದು ಹೇಳಿಕೆ ನೀಡಿದ್ದಾರೆ. ಆದರೆ ಆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಮುಖದಲ್ಲಿ ಹಾಲಿನ ಮಳೆಯೋ, ಜೇನಿನ ಹೊಳೆಯೋ ಎನ್ನುವಂತಹ ಖುಷಿ ಎದ್ದು ಕಾಣುತ್ತಿತ್ತು ಎಂದು ಹೇಳಿದರು.
ವೀರಪ್ಪ ಮೊಯ್ಲಿ ಅವರು ಮಾಜಿ ಕೇಂದ್ರ ಸಚಿವ ಹಾಗೂ ಸಿಎಂ ಆಗಿದ್ದವರು, ಅವರಿಗೆ ಪವರ್ ಶೇರ್ ಒಪ್ಪಂದದ ಬಗ್ಗೆ ಗೊತ್ತಿದೆ. ಹೀಗಾಗಿ ಮೊಯ್ಲಿ ಅವರು ಧೈರ್ಯವಾಗಿಯೇ ಆ ಹೇಳಿಕೆಯನ್ನು ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ನಾನೇ ಸಿಎಂ ಎನ್ನುತ್ತಾರೆ. ನಾವು ಮಾತನಾಡಿದರೆ ಜಾತಕ ಎಂದು ಹೇಳುತ್ತಾರೆ. ಹಾಗಾದರೆ ಶನಿಬಲ, ಗುರುಬಲ ಯಾಕೆ ಕೇಳುತ್ತಾರೆ. ಅಲ್ಲದೇ ಕೋಡಿ ಮಠದ ಸ್ವಾಮೀಜಿ ಸಹ ಸಿದ್ದರಾಮಯ್ಯ ಸುಲಭಕ್ಕೆ ಅಧಿಕಾರ ಬಿಡಲ್ಲ ಎಂದಿದ್ದಾರೆ. ನಾನು, ಯಾವಾಗ ಒದ್ದು ಕಿತ್ತುಕೊಳ್ಳುತ್ತೀರಾ ಎಂದು ಹೇಳಿದ್ದಕ್ಕೂ ಕೋಡಿಮಠದ ಸ್ವಾಮೀಜಿ ಹೇಳಿಕೆಗೂ, ಮೊಯ್ಲಿ ಹೇಳಿಕೆಗೂ ತಾಳೆ ಆಯ್ತಲ್ಲ. ಸಿಎಂ ಸ್ಥಾನ ಸಾಕಪ್ಪ ಎಂದು ಸಿಎಂ ಸಿದ್ದರಾಮಯ್ಯ ಅವರೇ ಅಧಿಕಾರ ಬಿಟ್ಟು ಹೋಗುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಡುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಬಾರಿ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಲಿರುವ ಬಜೆಟ್ ಲಾಸ್ಟ್ ಬಜೆಟ್ ಆಗಿರಬಹುದು. ಲಾಸ್ಟ್ ಆದರೂ ಲೀಸ್ಟ್ ಅಲ್ಲ, ಅವರು ಅತೀ ಅಧಿಕ ಸಾಲಮಾಡಿ ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟು ಹೋಗಬಹುದು. ಸಿದ್ದರಾಮಯ್ಯ ಇರುತ್ತಾರೋ ಅಥವಾ ಹೋಗುತ್ತಾರೆ ಎನ್ನುವ ಎಪಿಸೋಡ್ ಕಳೆದ ಎರಡು ವರ್ಷಗಳಿಂದ ನಡೆಯುತ್ತಲೇ ಇದೆ ಎಂದು ತಿಳಿಸಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…