ಬೆಂಗಳೂರು: ಮಾಜಿ ಸಿಎಂ ವೀರಪ್ಪ ಮೋಯ್ಲಿ ಅವರು ಭಾನುವಾರ ಕಾರ್ಯಕ್ರಮವೊಂದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಗೋದನ್ನು ಯಾರಿಂದಲೂ ತಪ್ಪಿಸಲು ಆಗಲ್ಲವೆಂದು ಹೇಳಿಕೆ ನೀಡಿದ್ದರು. ಆ ವೇಳೆ ಡಿಕೆಶಿ ಮುಖದಲ್ಲಿ ಖುಷಿ ಅರಳಿತ್ತು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಸಹ ವಿಡಿಯೋ ಮೂಲಕ ಮೊಯ್ಲಿಯವರ ಅಬ್ಬರದ ಭಾಷಣ ನೋಡಿದೆ. ಆ ಭಾಷಣದಲ್ಲಿ ವೀರಪ್ಪ ಮೊಯ್ಲಿ ಅವರು ಡಿಕೆಶಿ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಆಗಲ್ಲವೆಂದು ಹೇಳಿಕೆ ನೀಡಿದ್ದಾರೆ. ಆದರೆ ಆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಮುಖದಲ್ಲಿ ಹಾಲಿನ ಮಳೆಯೋ, ಜೇನಿನ ಹೊಳೆಯೋ ಎನ್ನುವಂತಹ ಖುಷಿ ಎದ್ದು ಕಾಣುತ್ತಿತ್ತು ಎಂದು ಹೇಳಿದರು.
ವೀರಪ್ಪ ಮೊಯ್ಲಿ ಅವರು ಮಾಜಿ ಕೇಂದ್ರ ಸಚಿವ ಹಾಗೂ ಸಿಎಂ ಆಗಿದ್ದವರು, ಅವರಿಗೆ ಪವರ್ ಶೇರ್ ಒಪ್ಪಂದದ ಬಗ್ಗೆ ಗೊತ್ತಿದೆ. ಹೀಗಾಗಿ ಮೊಯ್ಲಿ ಅವರು ಧೈರ್ಯವಾಗಿಯೇ ಆ ಹೇಳಿಕೆಯನ್ನು ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ನಾನೇ ಸಿಎಂ ಎನ್ನುತ್ತಾರೆ. ನಾವು ಮಾತನಾಡಿದರೆ ಜಾತಕ ಎಂದು ಹೇಳುತ್ತಾರೆ. ಹಾಗಾದರೆ ಶನಿಬಲ, ಗುರುಬಲ ಯಾಕೆ ಕೇಳುತ್ತಾರೆ. ಅಲ್ಲದೇ ಕೋಡಿ ಮಠದ ಸ್ವಾಮೀಜಿ ಸಹ ಸಿದ್ದರಾಮಯ್ಯ ಸುಲಭಕ್ಕೆ ಅಧಿಕಾರ ಬಿಡಲ್ಲ ಎಂದಿದ್ದಾರೆ. ನಾನು, ಯಾವಾಗ ಒದ್ದು ಕಿತ್ತುಕೊಳ್ಳುತ್ತೀರಾ ಎಂದು ಹೇಳಿದ್ದಕ್ಕೂ ಕೋಡಿಮಠದ ಸ್ವಾಮೀಜಿ ಹೇಳಿಕೆಗೂ, ಮೊಯ್ಲಿ ಹೇಳಿಕೆಗೂ ತಾಳೆ ಆಯ್ತಲ್ಲ. ಸಿಎಂ ಸ್ಥಾನ ಸಾಕಪ್ಪ ಎಂದು ಸಿಎಂ ಸಿದ್ದರಾಮಯ್ಯ ಅವರೇ ಅಧಿಕಾರ ಬಿಟ್ಟು ಹೋಗುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಡುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಬಾರಿ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಲಿರುವ ಬಜೆಟ್ ಲಾಸ್ಟ್ ಬಜೆಟ್ ಆಗಿರಬಹುದು. ಲಾಸ್ಟ್ ಆದರೂ ಲೀಸ್ಟ್ ಅಲ್ಲ, ಅವರು ಅತೀ ಅಧಿಕ ಸಾಲಮಾಡಿ ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟು ಹೋಗಬಹುದು. ಸಿದ್ದರಾಮಯ್ಯ ಇರುತ್ತಾರೋ ಅಥವಾ ಹೋಗುತ್ತಾರೆ ಎನ್ನುವ ಎಪಿಸೋಡ್ ಕಳೆದ ಎರಡು ವರ್ಷಗಳಿಂದ ನಡೆಯುತ್ತಲೇ ಇದೆ ಎಂದು ತಿಳಿಸಿದರು.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…