ಬೆಂಗಳೂರು: ದೆಹಲಿ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಗ್ಯಾರೆಂಟಿ ಠುಸ್ ಪಟಾಕಿ ಆಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಕರ್ನಾಟಕ ಬಿಜೆಪಿಗೆ ಶಕ್ತಿ ತುಂಬಿದಂತಾಗಿದೆ. ಈ ಚುನಾವಣಾ ಫಲಿತಾಂಶವೂ ಮುಂದಿನ ಕರ್ನಾಟಕ ಮತ್ತು ತೆಲಂಗಾಣ ಚುನಾವಣೆಗೆ ದಿಕ್ಸೂಚಿಯಾಗಿದ್ದು, ದೇಶಕ್ಕೆ ಸಿಕ್ಕಿರುವ ಗೆಲುವಾಗಿದೆ ಎಂದರು.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶೂನ್ಯ ಸಾಧನೆ ಮಾಡಲು ರಾಹುಲ್ ಗಾಂಧಿ ಅವರ ಬೆನ್ನಿಗೆ ಬೆನ್ನು ಕೊಟ್ಟು ಸಹಕರಿಸಿದ ಸ್ಟಾರ್ ಕ್ಯಾಂಪೆನರ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ವ್ಯಂಗ್ಯ ಮಾಡಿದ್ದಾರೆ.
ದೆಹಲಿ ವಿಧಾನಸಭೆಯ ಕಳಪೆ ಫಲಿತಾಂಶವನ್ನೇ ಆಧಾರವಾಗಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಅವರನ್ನು ಕಡೆಗಣಿಸಿದರೆ ಕರ್ನಾಟದಲ್ಲಿ ಕಾಂಗ್ರೆಸ್ ಪಕ್ಷದ ಗತಿ ಏನಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಬಣದವರು ಕಾಂಗ್ರೆಸ್ ಹೈಕಮಾಂಡ್ಗೆ ರಹಸ್ಯ ಪತ್ರಗಳನ್ನು ಬರೆಯುತ್ತಿದ್ದಾರೆ ಎನ್ನುವ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಜೋರಾಗಿಯೇ ಹರಿದಾಡುತ್ತಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…