ಬೆಂಗಳೂರು: ನಾನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಆಕಾಂಕ್ಷಿಯಲ್ಲ, ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸುತ್ತಿದ್ದೇನೆ. ನನಗೆ ಪಕ್ಷದ ಹಿರಿಯರು ನೀಡಿದ ವಿಪಕ್ಷ ನಾಯಕತ್ವದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ಹೀಗಾಗಿ ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದರು.
ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆರ್ಜಿ ಹಾಕಿಲ್ಲ, ಆ ಬಗ್ಗೆ ನಾನು ಯಾವುದೇ ರೀತಿಯ ಆಲೋಚನೆಗಳನ್ನು ಮಾಡಿಲ್ಲ. ಆದರೆ ನಮ್ಮ ಪಕ್ಷದಲ್ಲಿ ಈ ರೀತಿಯ ಸಮಸ್ಯೆ ಎದುರಾಗಿರುವುದು ನನಗೂ ನೋವು ಉಂಟು ಮಾಡಿದೆ. ಪಕ್ಷದಲ್ಲಿ ಎಲ್ಲರೂ ಹೊಂದಾಣಿಕೆ ಮಾಡಿಕೊಂಡು ಮುಂದುವರಿಯಬೇಕಾಗುತ್ತದೆ ಎಂದು ಹೇಳಿದರು.
ಇನ್ನೂ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಣದ ಬಗ್ಗೆ ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಅಲ್ಲದೇ ಪಕ್ಷದಲ್ಲಿರುವ ಎಲ್ಲ ಸಮಸ್ಯೆಗಳು ನಿವಾರಣೆಯಾಗಲಿ ಎಂದು ಬಯಸುತ್ತೇನೆ. ಈ ರಾಜ್ಯಾಧ್ಯಕ್ಷ ಚುನಾವಣೆಯೂ ಕರ್ನಾಟಕದಲ್ಲಿ ಮಾತ್ರ ನಡೆಯುತ್ತಿಲ್ಲ, ಇಡೀ ದೇಶದಲ್ಲಿ ಚುನಾವಣೆ ನಡೆಯುತ್ತಿದೆ. ಹೀಗಾಗಿ ಇಲ್ಲಿ ಮಾತ್ರ ಎಲ್ಲರ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ತಿಳಿಸಿದರು.
ನಮ್ಮ ಪಕ್ಷದ ನಾಯಕರು ಒಬ್ಬರ ಮೇಲೆ ಮತ್ತೊಬ್ಬರು ದೂರುವುದು ಬೇಸರದ ಸಂಗತಿಯಾಗಿದೆ. ಹಾಗಾಗಿ ರಾಷ್ಟ್ರೀಯ ನಾಯಕರು ನೀಡುವ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು. ಇಲ್ಲಿ ಎಲ್ಲರಿಗೂ ಅಭಿಪ್ರಾಯ ತಿಳಿಸುವ ಅವಕಾಶವಿದೆ. ಪಕ್ಷದಲ್ಲಿ ಇಂತಹ ಸಮಸ್ಯೆಗಳಿಂದಾಗಿ ಹಿನ್ನಡೆ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…