ರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ| ನಾನು ರಾಜ್ಯಾಧ್ಯಕ್ಷ ಹುದ್ದೆಗೆ ಆಕಾಂಕ್ಷಿಯಲ್ಲ: ಆರ್‌.ಅಶೋಕ್‌

ಬೆಂಗಳೂರು: ನಾನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಆಕಾಂಕ್ಷಿಯಲ್ಲ, ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸುತ್ತಿದ್ದೇನೆ. ನನಗೆ ಪಕ್ಷದ ಹಿರಿಯರು ನೀಡಿದ ವಿಪಕ್ಷ ನಾಯಕತ್ವದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ಹೀಗಾಗಿ ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದರು.

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆರ್ಜಿ ಹಾಕಿಲ್ಲ, ಆ ಬಗ್ಗೆ ನಾನು ಯಾವುದೇ ರೀತಿಯ ಆಲೋಚನೆಗಳನ್ನು ಮಾಡಿಲ್ಲ. ಆದರೆ ನಮ್ಮ ಪಕ್ಷದಲ್ಲಿ ಈ ರೀತಿಯ ಸಮಸ್ಯೆ ಎದುರಾಗಿರುವುದು ನನಗೂ ನೋವು ಉಂಟು ಮಾಡಿದೆ. ಪಕ್ಷದಲ್ಲಿ ಎಲ್ಲರೂ ಹೊಂದಾಣಿಕೆ ಮಾಡಿಕೊಂಡು ಮುಂದುವರಿಯಬೇಕಾಗುತ್ತದೆ ಎಂದು ಹೇಳಿದರು.

ಇನ್ನೂ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಬಣದ ಬಗ್ಗೆ ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಅಲ್ಲದೇ ಪಕ್ಷದಲ್ಲಿರುವ ಎಲ್ಲ ಸಮಸ್ಯೆಗಳು ನಿವಾರಣೆಯಾಗಲಿ ಎಂದು ಬಯಸುತ್ತೇನೆ. ಈ ರಾಜ್ಯಾಧ್ಯಕ್ಷ ಚುನಾವಣೆಯೂ ಕರ್ನಾಟಕದಲ್ಲಿ ಮಾತ್ರ ನಡೆಯುತ್ತಿಲ್ಲ, ಇಡೀ ದೇಶದಲ್ಲಿ ಚುನಾವಣೆ ನಡೆಯುತ್ತಿದೆ. ಹೀಗಾಗಿ ಇಲ್ಲಿ ಮಾತ್ರ ಎಲ್ಲರ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ತಿಳಿಸಿದರು.

ನಮ್ಮ ಪಕ್ಷದ ನಾಯಕರು ಒಬ್ಬರ ಮೇಲೆ ಮತ್ತೊಬ್ಬರು ದೂರುವುದು ಬೇಸರದ ಸಂಗತಿಯಾಗಿದೆ. ಹಾಗಾಗಿ ರಾಷ್ಟ್ರೀಯ ನಾಯಕರು ನೀಡುವ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು. ಇಲ್ಲಿ ಎಲ್ಲರಿಗೂ ಅಭಿಪ್ರಾಯ ತಿಳಿಸುವ ಅವಕಾಶವಿದೆ. ಪಕ್ಷದಲ್ಲಿ ಇಂತಹ ಸಮಸ್ಯೆಗಳಿಂದಾಗಿ ಹಿನ್ನಡೆ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಅರ್ಚನ ಎಸ್‌ ಎಸ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago