ರಾಜ್ಯ

ಕಾಂಗ್ರೆಸ್ ಕೋಳಿ ಕೂಗಿದರೆ ರಾಜ್ಯದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ: ಆರ್‌.ಅಶೋಕ್‌

ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಹಣ ಜಮೆಯಾಗದ ಬಗ್ಗೆ ಪ್ರಶ್ನಿಸಿದ್ದಕ್ಕೇ ಆ ಹಣವೇನು ತಿಂಗಳ ಸಂಬಳ ಅಲ್ಲವಲ್ಲ ಎಂದಿದ್ದ ಸಚಿವ ಕೆ.ಜೆ. ಜಾರ್ಜ್‌ ಅವರ ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್‌ ಪ್ರತಿಕ್ರಿಯಿಸಿ ಕಾಂಗ್ರೆಸ್ ಕೋಳಿ ಕೂಗಿದರೆ ರಾಜ್ಯದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಎಂದು ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ? ಎಂದು ಪ್ರಶ್ನಿಸಿದ್ದಾರೆ.

ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಎಂದು ಮಾತಾದರರೇನು ನಿಮ್ಮ ಬಳಿ ಭಿಕ್ಷೆ ಬೇಡುತ್ತಿಲ್ಲ. ಈ ಗ್ಯಾರೆಂಟಿ ಯೋಜನೆಗಳನ್ನು ಪ್ರಾರಂಭಿಸಿ ಎಂದು ಜನತೆ ಕೇಳಿಯೂ ಇರಲಿಲ್ಲ. ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾಡುತ್ತೀರಿ? ನಿಮ್ಮ ಕೈಲಾದರೆ ಕೊಟ್ಟ ಮಾತಿನಂತೆ ಗ್ಯಾರೆಂಟಿ ಯೋಜನೆಗಳನ್ನು ಗೌರವದಿಂದ ಜಾರಿ ಮಾಡಿ. ನಿಮ್ಮ ಕೈಲಾಗದಿದ್ದರೆ ಬಿಟ್ಟುಬಿಡಿ, ಗ್ಯಾರೆಂಟಿ ಯೋಜನೆಗಳು ಜಾರಿ ಆಗುವ ಮುನ್ನವೂ ಜನರು ತಮ್ಮ ಬದುಕು ಕಟ್ಟಿಕೊಂಡಿದ್ದರು. ಅವು ಇಲ್ಲದೆಯೂ ತಮ್ಮ ಬದುಕು ಕಟ್ಟಿಕೊಳ್ಳುತ್ತಾರೆ. ಕಾಂಗ್ರೆಸ್ ಕೋಳಿ ಕೂಗಿದರೆ ಕರ್ನಾಟಕದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ. ಈಗಾಗಲೇ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಅಡ್ರೆಸ್ ಇಲ್ಲದಂತಾಗಿದೆ. ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ನಿರ್ನಾಣ ಆಗುವುದು ಗ್ಯಾರೆಂಟಿ ಎಂದು ಎಚ್ಚರಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

4 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

4 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

4 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

4 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

4 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

4 hours ago