ರಾಜ್ಯ

ಶಿಷ್ಟಾಚಾರ ಪಾಲನೆಯಲ್ಲೂ ರಾಜ್ಯ ಸರ್ಕಾರ ಕೀಳು ರಾಜಕೀಯ ಮಾಡುತ್ತಿದೆ: ಆರ್.ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರ ಶಿಷ್ಟಾಚಾರದಲ್ಲಿ ಒಂದು ಕಡೆ ಕೀಳು ರಾಜಕೀಯ ಮಾಡುತ್ತಿದ್ದರೆ, ಮತ್ತೊಂದು ಕಡೆ ಹೂಡಿಕೆದಾರರ ಸಮಾವೇಶಕ್ಕೆ ಪ್ರವೇಶಾತಿ ಶುಲ್ಕ ವಿಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಎಷ್ಟು ಪಾಪರ್ ಆಗಿದೆ ಎಂದು ಮತ್ತೊಮ್ಮೆ ಪ್ರದರ್ಶನ ಮಾಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಇಂದು(ಫೆಬ್ರವರಿ.11) ಸಂಜೆ ಉದ್ಘಾಟನೆ ಆಗಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಬಗ್ಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಇಂದಿನ ಎಲ್ಲಾ ದಿನಪತ್ರಿಕೆಗಳಲ್ಲೂ ಫುಲ್ ಪೇಜ್ ಜಾಹೀರಾತು ನೀಡಿದೆ. ಸಮಾವೇಶಕ್ಕೆ ನಮ್ಮ ಶುಭ ಹಾರೈಕೆಗಳು. ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಹರಿದು ಬರಲಿ, ಕಳೆದ 20 ತಿಂಗಳುಗಳಿಂದ ಸಂಪೂರ್ಣವಾಗಿ ಸ್ಥಬ್ಧವಾಗಿರುವ ರಾಜ್ಯದ ಅಭಿವೃದ್ಧಿಗೆ ಇನ್ನು ಮುಂದೆಯಾದರೂ ಚುರುಕು ಸಿಗಬೇಕೆಂದು
ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಹೂಡಿಕೆದಾರರ ಸಮಾವೇಶದ ಉದ್ಘಾಟನೆ ನೆರವೇರಿಸಲಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಫೋಟೋ ಜಾಹೀರಾತಿನಲ್ಲಿ ಯಾಕಿಲ್ಲ? ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಫೋಟೋ ಯಾಕೆ ಹಾಕಿಲ್ಲ? ಕೇವಲ ಸಿಎಂ, ಡಿಸಿಎಂ ಹಾಗು ಕೈಗಾರಿಕಾ ಸಚಿವರ ಫೋಟೋ ಹಾಕಲು ಹೂಡಿಕೆದಾರರ ಸಮಾವೇಶ ರಾಜಕೀಯ ಕಾಂಗ್ರೆಸ್ ಪಕ್ಷದ ರಾಜಕೀಯ ಸಮಾವೇಶವಲ್ಲ. ಇಂತಹ ಜಾಗತಿಕ ಸಮಾವೇಶದ ಜಾಹೀರಾತಿನಲ್ಲೂ ಕ್ಷುಲ್ಲಕ ರಾಜಕೀಯ ಮಾಡುವ ಕಾಂಗ್ರೆಸ್‌ ಪಕ್ಷಕ್ಕೆ ನಿಜಕ್ಕೂ ನಾಚಿಕೆಯಾಗಬೇಕು. ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ ಎಂದು ಭಾಷಣ ಬಿಗಿಯುವ ಕಾಂಗ್ರೆಸ್ ನಾಯಕರಿಗೆ ರಾಜ್ಯದ ಪ್ರಥಮ ಪ್ರಜೆಯಾಗಿರುವ ರಾಜ್ಯಪಾಲರ ಫೋಟೋ ಹಾಕುವ ಕನಿಷ್ಠ ಶಿಷ್ಟಾಚಾರವನ್ನೂ ಪಾಲನೆ ಮಾಡುವ ಸೌಜನ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಂಜಿನಿಯರಿಂಗ್, ಮ್ಯಾನೇಜ್ಮೆಂಟ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ನವೋದ್ಯಮ ಪ್ರಾರಂಭಿಸಬೇಕು ಎಂಬ ಉತ್ಸಾಹದಲ್ಲಿರುವ ಯುವಕ, ಯುವತಿಯರಿಗೆ, ವೃತ್ತಿಪರರಿಗೆ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವುದು ಒಂದು ಉತ್ತಮ ಕಲಿಕಾ ಅವಕಾಶವೂ ಹೌದು, ತಮ್ಮ ಕಾರ್ಯ ಕ್ಷೇತ್ರದಲ್ಲಿರುವ ಇತರರನ್ನು ಸಂಪರ್ಕ ಮಾಡಿ ನೆಟ್‌ ವರ್ಕಿಂಗ್‌ ಮಾಡಿಕೊಳ್ಳುವ ವೇದಿಕೆಯೂ ಹೌದು. ಆದರೆ ಹೂಡಿಕೆದಾರರ ಸಮಾವೇಶಕ್ಕೆ ಪ್ರವೇಶ ಶುಲ್ಕ ವಿಧಿಸುವ ಮೂಲಕ ಇವರೆಲ್ಲರಿಗೂ ಸಮಾವೇಶದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಈ ದರಿದ್ರ ಸರ್ಕಾರ ಕಿತ್ತುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ರಾಜ್ಯದ ಯುವ ಜನಾಂಗಕ್ಕೆ ಈ ಹೂಡಿಕೆದಾರರ ಸಮಾವೇಶದಲ್ಲಿ ಪ್ರವೇಶ ಇಲ್ಲದ ಮೇಲೆ ಈ ಸಮಾವೇಶ ಮಾಡುತ್ತಿರುವುದಾದರೂ ಯಾರಿಗೋಸ್ಕರ? ಮೂರು ದಿನ ಫೋಟೋ ಶೂಟ್ ಮಾಡಿಸಿಕೊಂಡು ಪುಕ್ಕಟೆ ಪ್ರಚಾರ ಪಡೆಯೋದಕ್ಕಾ? ಅಥವಾ ಗ್ಯಾರೆಂಟಿಗಳಿಂದ ದಿವಾಳಿ ಆಗಿರುವ ಸರ್ಕಾರದ ಬೊಕ್ಕಸವನ್ನು ಪ್ರವೇಶ ಶುಲ್ಕ ಮೂಲಕ ವಸೂಲಿ ಮಾಡುವುದಕ್ಕಾ? ಎಂದು ಪ್ರಶ್ನಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

15 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

15 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

18 hours ago