ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಿಗೆ, ಹಿರಿಯ ಶಾಸಕರಿಗೆ ರಕ್ಷಣೆ ಇಲ್ಲ ಅಂದ ಮೇಲೆ, ರಾಜ್ಯದ ಜನ ಸಾಮಾನ್ಯರಿಗೆ ರಕ್ಷಣೆ ಇದೆಯಾ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ದಲಿತ ಸಚಿವರೊಬ್ಬರು ತಮ್ಮ ಮೇಲೆ ನಡೆಯುತ್ತಿರುವ ಹನಿಟ್ರ್ಯಾಪ್ ಪ್ರಯತ್ನಗಳ ಬಗ್ಗೆ ಅಸಹಾಯಕರಾಗಿ ಸದನದಲ್ಲಿ ಹಂಚಿಕೊಂಡು ಸರ್ಕಾರದ ರಕ್ಷಣೆ ಕೋರಿದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಎಂದಿನ ನಟ್ಟು-ಬೊಲ್ಟು ಟೈಟು ಮಾಡುವ ಧಾಟಿಯಲ್ಲಿ, “ಹಲೋ ಎಂದರೆ ಹಲೋ ಎನ್ನುತ್ತಾರೆ”, “ಮಾಡಿದ್ದುಣ್ಣೋ ಮಹರಾಯ” ಎಂದು ಸಚಿವರ ಮೇಲೆಯೇ ಗೂಬೆ ಕೂರಿಸುವ ಅರ್ಥದಲ್ಲಿ ಮಾತಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಮ್ಮ ರಾಜ್ಯದಲ್ಲಿ ಒಬ್ಬ ಹಿರಿಯ ಶಾಸಕರು, ಹಾಲಿ ಸಚಿವರಿಗೇ ರಕ್ಷಣೆ ಇಲ್ಲ ಅಂದ ಮೇಲೆ ಈ ಹನಿಟ್ರ್ಯಾಪ್ ಕಾಂಗ್ರೆಸ್ ಸರ್ಕಾರದಲ್ಲಿ ಜನ ಸಾಮಾನ್ಯರಿಗೆ ಯಾವ ರಕ್ಷಣೆ ಇದೆ? ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…