ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಿಗೆ, ಹಿರಿಯ ಶಾಸಕರಿಗೆ ರಕ್ಷಣೆ ಇಲ್ಲ ಅಂದ ಮೇಲೆ, ರಾಜ್ಯದ ಜನ ಸಾಮಾನ್ಯರಿಗೆ ರಕ್ಷಣೆ ಇದೆಯಾ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ದಲಿತ ಸಚಿವರೊಬ್ಬರು ತಮ್ಮ ಮೇಲೆ ನಡೆಯುತ್ತಿರುವ ಹನಿಟ್ರ್ಯಾಪ್ ಪ್ರಯತ್ನಗಳ ಬಗ್ಗೆ ಅಸಹಾಯಕರಾಗಿ ಸದನದಲ್ಲಿ ಹಂಚಿಕೊಂಡು ಸರ್ಕಾರದ ರಕ್ಷಣೆ ಕೋರಿದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಎಂದಿನ ನಟ್ಟು-ಬೊಲ್ಟು ಟೈಟು ಮಾಡುವ ಧಾಟಿಯಲ್ಲಿ, “ಹಲೋ ಎಂದರೆ ಹಲೋ ಎನ್ನುತ್ತಾರೆ”, “ಮಾಡಿದ್ದುಣ್ಣೋ ಮಹರಾಯ” ಎಂದು ಸಚಿವರ ಮೇಲೆಯೇ ಗೂಬೆ ಕೂರಿಸುವ ಅರ್ಥದಲ್ಲಿ ಮಾತಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಮ್ಮ ರಾಜ್ಯದಲ್ಲಿ ಒಬ್ಬ ಹಿರಿಯ ಶಾಸಕರು, ಹಾಲಿ ಸಚಿವರಿಗೇ ರಕ್ಷಣೆ ಇಲ್ಲ ಅಂದ ಮೇಲೆ ಈ ಹನಿಟ್ರ್ಯಾಪ್ ಕಾಂಗ್ರೆಸ್ ಸರ್ಕಾರದಲ್ಲಿ ಜನ ಸಾಮಾನ್ಯರಿಗೆ ಯಾವ ರಕ್ಷಣೆ ಇದೆ? ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…