ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಕೋರರಿಗೆ ಇಡೀ ಸರ್ಕಾರ ಬೆಂಬಲ ನೀಡಿದ್ದು, ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿ ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.
ವಿಧಾನಸೌಧದಲ್ಲಿ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂಭಾಗ ಇಂದು(ಫೆಬ್ರವರಿ.12) ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ. ಇದರಿಂದ ತಿಳಿಯುವುದೆನೆಂದರೆ ಕಾಂಗ್ರೆಸ್ ಸರ್ಕಾರ ಮರಳು ಮಾಫಿಯಾ ಜೊತೆ ಸೇರಿದ್ದು, ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಮತಾಂಧರು ದಾಳಿ ಮಾಡಿದರೂ ಪೊಲೀಸರಿಗೆ ರಕ್ಷಣೆ ನೀಡಿಲ್ಲ. ಇಂತಹ ಘಟನೆಗಳಿಂದ ಪೊಲೀಸ್ ಅಧಿಕಾರಿಗಳ ಆತ್ಮಸ್ಥೈರ್ಯ ಕುಸಿದಿದೆ. ನಿಷ್ಠಾವಂತ ಅಧಿಕಾರಿಗಳು ಹಾಗೂ ಪೊಲೀಸರಿಗೆ ರಕ್ಷಣೆ ನೀಡಿ ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ನಿಷ್ಠಾವಂತ ಅಧಿಕಾರಿಗಳನ್ನು ಕಾಪಾಡಬೇಕಾದ ವಿಧಾನಸೌಧ ಮೌನ ಸೌಧವಾಗಿದೆ. ಸರ್ಕಾರಿ ಕೆಲಸ ದೇವರ ಕೆಲಸ ಎಂದು ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಬರೆಸಿದ್ದಾರೆ. ಆದರೆ ಇದೀಗ ಕಾಂಗ್ರೆಸ್ನಿಂದಾಗಿ ಇದು ದೆವ್ವಗಳ ಕೆಲಸ ಎಂಬಂತಾಗಿದೆ. ಭದ್ರಾವತಿಯಲ್ಲಿ ಮರಳು ಮಾಫಿಯಾ ತಡೆಯಲು ಹೋದ ಮಹಿಳಾ ಅಧಿಕಾರಿಯ ಮೇಲೆ ಲಾರಿ ಹತ್ತಿಸಿ ಕೊಲ್ಲುವುದಾಗಿ ಶಾಸಕರ ಮಗ ಜೀವ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಆ ವೇಳೆ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿರುವುದರಿಂದ ಅಧಿಕಾರಿಗಳಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಎಫ್ಐಆರ್ನಲ್ಲಿ ಶಾಸಕ ಸಂಗಮೇಶ್ ಪುತ್ರನ ಹೆಸರಿಲ್ಲ. ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗಿದೆ. ಹೀಗಾಗಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿಕೆ ನೀಡುವ ಬದಲು ಬೀದಿಗಿಳಿದು ಹೋರಾಟ ಮಾಡಬೇಕು ಎಂದು ಹೇಳಿದರು.
ಕಳೆದ ದಿನಗಳ ಹಿಂದೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಮೈಸೂರಿನಲ್ಲಿ ಯಾರನ್ನೂ ಬಂಧಿಸಿಲ್ಲ. ಇಡೀ ಸರ್ಕಾರ ಗಲಭೆಕೋರರ ಪರವಾಗಿ ನಿಂತಿದೆ. ಅದರ ಬದಲು ಪೊಲೀಸ್ ಅಧಿಕಾರಿಗಳನ್ನೇ ಟೀಕಿಸಲಾಗುತ್ತಿದೆ. ಮುಸ್ಲಿಮ್ರಿಂದ ಗೆದ್ದ ಸಚಿವರು ಅವರ ಪರವಾಗಿ ಮಾತಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನೂ ಭದ್ರಾವತಿಯ ಮಹಿಳಾ ಅಧಿಕಾರಿಯ ಮೇಲೆ ಒತ್ತಡ ಹೇರಲಾಗಿದೆ. ಆ ಭಯದಿಂದಲೇ ಅವರು ಯಾರ ಮೇಲೂ ದೂರು ನೀಡಿಲ್ಲ. ದೂರು ನೀಡಿದರೂ ಸರ್ಕಾರ ಅಧಿಕಾರಿಯ ಪರವಾಗಿ ನಿಲ್ಲುವುದಿಲ್ಲ. ಪೊಲೀಸ್ ಅಧಿಕಾರಿಗೆ ಸ್ಟಾರ್ ನೀಡಿದವರು ಯಾರು ಎಂದು ಸಚಿವ ರಾಜಣ್ಣ ಪ್ರಶ್ನೆ ಮಾಡಿದ್ದಾರೆ. ಪೊಲೀಸರಿಗೆ ಜನರು ಸ್ಟಾರ್ ನೀಡಿದ್ದಾರೆ. ಅವರಿಗೆ ಜನರ ತೆರಿಗೆ ಹಣದಿಂದ ಸಂಬಳ ನೀಡಲಾಗುತ್ತಿದೆಯೇ ಹೊರತು, ಸಚಿವರ ಹಣದಿಂದ ನೀಡುತ್ತಿಲ್ಲ. ಪೊಲೀಸರನ್ನು ಪ್ರಶ್ನಿಸುವುದಿದ್ದರೆ ಕಚೇರಿಯಲ್ಲಿ ಕರೆದು ಮಾತಾಡಬೇಕು. ಅದನ್ನು ಬಿಟ್ಟು ಸಾರ್ವಜನಿಕ ಸ್ಥಳದಲ್ಲಿ ಅವರನ್ನು ನಿಂದಿಸಬಾರದು. ಹೀಗೆ ಮಾಡಿದರೆ ಪೊಲೀಸರು ಆತ್ಮವಿಶ್ವಾಸದಿಂದ ಕೆಲಸ ಮಾಡುವುದು ಹೇಗೆ? ಎಂದು ಪ್ರಶ್ನೆ ಮಾಡಿದರು.
ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…
ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ…
ಪುನೀತ್ ರಾಜಕುಮಾರ್ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್ಸ್ಟಾರ್ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್…