ರಾಜ್ಯ

ಈ ಸಮಾವೇಶ 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಆರ್‌.ಅಶೋಕ್‌ ವ್ಯಂಗ್ಯ

ಬೆಂಗಳೂರು: ಬೆಳಗಾವಿಯಲ್ಲಿ ಇಂದು ನಡೆಯುತ್ತಿರುವ ಸಮಾವೇಶವೂ 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.21) ಕಾಂಗ್ರೆಸ್‌ ಸಮಾವೇಶದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ಬೆಳಗಾವಿಯಲ್ಲಿ ಇಂದು ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್‌ ಸಮಾವೇಶ ಮಾಡಲಾಗಿದೆ. ಗಾಂಧೀಜಿ ಬಗ್ಗೆ ಅಷ್ಟೊಂದು ಪ್ರೀತಿ ಇದ್ದರೆ, ಕಾಂಗ್ರೆಸ್‌ ಭವನಕ್ಕೆ ಗಾಂಧೀಜಿ ಅಥವಾ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಹೆಸರಿಡಬೇಕಿತ್ತು. ಆದರೆ ಅಂದಿನ ಸ್ವಾತಂತ್ರ್ಯ ಹೋರಾಟದಲ್ಲಿ ಸೋನಿಯಾ ಗಾಂಧಿಯಾಗಲೀ ಅಥವಾ ರಾಹುಲ್‌ ಗಾಂಧಿಯಾಗಲೀ ಭಾಗವಹಿಸಿಲ್ಲ. ಇನ್ನೂ ಕಾಂಗ್ರೆಸ್‌ನವರಿಗೆ ಗಾಂಧೀಜಿಯ ಹೆಸರು ಹೇಳುವ ನೈತಿಕತೆ ಇಲ್ಲ. ಹೀಗಾಗಿ ಇದು 60 ಪರ್ಸೆಂಟ್‌ ವಸೂಲಿ ಮಾಡುವ ನೆನಪಿನ ಜಾತ್ರೆಯೇ ಹೊರತು ಸಮಾವೇಶವಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಸುವಿನ ಕೆಚ್ಚಲು ಕತ್ತರಿಸಿದ್ದು, ಬ್ಯಾಂಕ್‌ ದರೋಡೆ ಮತ್ತು ಮಹಿಳೆ ಮೇಲಿನ ಅತ್ಯಾಚಾರ ಹೀಗೇ ಮೊದಲಾದ ಘಟನೆಗಳನ್ನು ಕಡೆಗಣಿಸಿ ಸರ್ಕಾರ ಸಮಾವೇಶ ಮಾಡಿದೆ. ಅಲ್ಲದೇ ಆಡಳಿತ ಸರ್ಕಾರವನ್ನು ಅಭಿವೃದ್ಧಿ ಬಗ್ಗೆ ಪ್ರಶ್ನೆ ಮಾಡಿದರೆ, ಬಿಜೆಪಿ ಸರ್ಕಾರದ ಅವಧಿಗೆ ಹೋಲಿಸುತ್ತಾರೆ ಎಂದರೆ ಕಾಂಗ್ರೆಸ್‌ ಹೇಗೆ ಭಿನ್ನವಾಗುತ್ತದೆ? ಎಂದು ಪ್ರಶ್ನಿಸಿದರು.

ಇನ್ನೂ ಕಾಂಗ್ರೆಸ್‌ ಶಾಸಕರು ಸಹ ಅನುದಾನ ದೊರೆತಿಲ್ಲ ಎಂದು ಹೇಳುತ್ತಿದ್ದಾರೆ. ಗಾಂಧೀಜಿಯಂತೆ ಸರಳವಾಗಿರಬೇಕು ಎಂದು ಹೇಳಿದ್ದಾರೆ ಅಷ್ಟೇ. ಆದರೆ ಸಮಾವೇಶದ ಕಟೌಟ್‌ಗಳಲ್ಲಿ ಕಾಂಗ್ರೆಸ್‌ನ ವಿಜೃಂಭಣೆ ಕಂಡುಬಂದಿದೆ. ಇದು ನಕಲಿ ಗಾಂಧಿಗಳ ಸಮಾವೇಶ ಎಂದು ಕಿಡಿಕಾರಿದರು.

ವೀರ ಮಹಿಳೆ ಕಿತ್ತೂರು ಚೆನ್ನಮ್ಮಳಿಗೆ ಅಪಮಾನ: ಕಾಂಗ್ರೆಸ್‌ ಕ್ಷಮೆ ಕೋರಲಿ

ಕಿತ್ತೂರು ರಾಣಿ ಚೆನ್ನಮ್ಮ ಕರ್ನಾಟಕದ ವೀರ ಮಹಿಳೆ. ಅವರನ್ನು ಪ್ರಿಯಾಂಕಾ ವಾದ್ರಾಗೆ ಹೋಲಿಕೆ ಮಾಡುವುದು ಅಕ್ಷಮ್ಯ ಅಪರಾಧವಾಗಿದೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಈ ಕೂಡಲೇ ಸಾರ್ವಜನಿಕರ ಕ್ಷಮೆ ಯಾಚಿಸಬೇಕು. ಇದರಿಂದ ಚೆನ್ನಮ್ಮಳಿಗೆ ಅಪಮಾನವಾಗಿದೆ. ಕಾಂಗ್ರೆಸ್‌ ಪಕ್ಷ ಕೂಡ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago