ರಾಜ್ಯ

ಮಹಾಕುಂಭಮೇಳದಲ್ಲಿ ಅಮಿತ್‌ ಶಾ ಸ್ನಾನ: ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಆರ್.ಅಶೋಕ್‌ ಕಿಡಿ

ಬೆಂಗಳೂರು: 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ವಿರುದ್ಧ ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌ ಪಕ್ಷಕ್ಕೆ ಹಿಂದೂ ಧರ್ಮವೆಂದರೆ , ಭಾರತೀಯ ಸಂಸ್ಕೃತಿ, ಪರಂಪರೆ ಎಂದರೆ ಯಾಕಿಷ್ಟು ದ್ವೇಷ, ಅಸಡ್ಡೆ? ಎಂದು ಪ್ರಶ್ನಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ, 144 ವರ್ಷಕ್ಕೊಮ್ಮೆ ಬರುವ ಮಹಾಕುಂಭಮೇಳದ ಈ ಪರಮ ಪವಿತ್ರ ಪರ್ವಕಾಲದಲ್ಲಿ ತ್ರಿವೇಣಿ ಸಂಗಮದಲ್ಲಿ ಒಮ್ಮೆ ಮಿಂದರೆ ಪಾಪಗಳೆಲ್ಲವೂ ಕಳೆಯುತ್ತದೆ, ಪುಣ್ಯ ಲಭಿಸುತ್ತದೆ ಎಂಬುದು ಕೋಟ್ಯಂತರ ಹಿಂದೂಗಳ ನಂಬಿಕೆಯಾಗಿದೆ. ಅಲ್ಲದೇ ಭಾರತೀಯತೆ, ಸನಾತನ ಧರ್ಮದ ಬಗ್ಗೆ ಕಣಕಣದಲ್ಲೂ ದ್ವೇಷ ತುಂಬಿಕೊಂಡಿರುವ ನಕಲಿ ಗಾಂಧಿ ಕುಟುಂಬವನ್ನ ಓಲೈಸುವ ಭರದಲ್ಲಿ, ಶತಕೋಟಿ ಹಿಂದೂಗಳ ನಂಬಿಕೆಯನ್ನು ಯಾಕೆ ಅಪಮಾನಿಸುತ್ತೀರಿ? ಎಂದು ವಾಗ್ದಾಳಿ ನಡೆಸಿದ್ದಾರೆ.

ಹಜ್ ಯಾತ್ರೆ ಬಗ್ಗೆಯೋ, ರಂಜಾನ್ ಉಪವಾಸದ ಬಗ್ಗೆಯೋ ಈ ರೀತಿ ಟೀಕೆ ಮಾಡುವ ಧೈರ್ಯ ತೋರಿ ನೋಡೋಣ. ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಲ್ಲಿ ಇನ್ನೊಬ್ಬರಿಗೆ ತೊಂದರೆಯಾಗದಂತೆ ಎಲ್ಲರಿಗೂ ತಮ್ಮ ತಮ್ಮ ಮತ, ಧರ್ಮ, ನಂಬಿಕೆಗಳನ್ನು ಆಚರಣೆ ಮಾಡುವ ಹಕ್ಕು ಮತ್ತು ಸ್ವಾತಂತ್ರ್ಯವಿದೆ ಎಂದಿದ್ದಾರೆ. ಹೀಗಿರುವಾಗ ಗಂಗೆಯಲ್ಲಿ ಮಿಂದೇಳುವ ಆಚರಣೆಯನ್ನು ಪ್ರಶ್ನೆ ಮಾಡೋದು, ಹಿಂದೂ ಧರ್ಮಕ್ಕೆ ಮಾತ್ರವಲ್ಲ ಅದು ಸಂವಿಧಾನಕ್ಕೂ ಅಪಚಾರ ಮಾಡಿದಂತೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

1 hour ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

1 hour ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

1 hour ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

1 hour ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

12 hours ago