ರಾಜ್ಯ

ಸಿಎಂ ತವರಲ್ಲೇ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಇಲ್ಲ: ವಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರುಣ ಕ್ಷೇತ್ರದಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಕೂಡ ಈ ಸರ್ಕಾರಕ್ಕಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಗಿನಡಿ ಅವರ ಕ್ಷೇತ್ರ ವರುಣದಲ್ಲಿ ಕಲುಷಿತ ನೀರನ್ನು ಜನರು ಸೇವಿಸಿ ಸಾವಿಗೀಡಾಗಿದ್ದಾರೆ. ಅಂದರೆ ಮುಖ್ಯಮಂತ್ರಿಗಳಿಗೆ ಕುಡಿಯುವ ನೀರು ನೀಡುವ ಯೋಗ್ಯತೆ ಇಲ್ಲ. ಈಗ ತುಮಕೂರಿನಲ್ಲೂ ಕಲುಷಿತ ನೀರು ಸೇವಿಸಿ ಆರು ಜನರ ಸಾವಾಗಿದೆ. ಇದಕ್ಕೆ ಜಿಲ್ಲಾಧಿಕಾರಿಯನ್ನು ಕೇಳಿದರೆ ಮೂತ್ರಪಿಂಡ ಸಮಸ್ಯೆ ಎಂದು ಕಾರಣ ಹೇಳಿದ್ದಾರೆ. ಆರೋಗ್ಯ ಸಮಸ್ಯೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಅದನ್ನೇ ಸಬೂಬು ಮಾಡಬಾರದು. ಈ ಕುರಿತು ವರದಿ ಕೇಳಿದ್ದೇನೆ ಎಂದರು‌.

ಕೊಪ್ಪಳದಲ್ಲಿ ಕೂಡ ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ್ದಾರೆ. ಕುಡಿಯುವ ನೀರಿನ ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ‌‌. ಇದರಿಂದಲೇ ಜನರು ಕಲುಷಿತ ನೀರು ಕುಡಿಯಬೇಕಾಗಿದೆ. ಶಾಸಕರು ಅನುದಾನ ಕೇಳಿದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಯ್ಮುಚ್ಚಿಕೊಂಡು ಸುಮ್ಮನಿರಿ ಎಂದಿದ್ದಾರೆ. ಜನರ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ನೇರ ಕಾರಣ ಎಂದು ಕಿಡಿಕಾರಿದರು.

ಅಧಿಕಾರಿಗಳ ಬಳಿ ಈ ಬಗ್ಗೆ ಕಾರಣ ಕೇಳಿದರೆ ಜಾತ್ರೆಯಲ್ಲಿ ಅವಾಂತರವಾಗಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಯವರು 15 ಬಾರಿ ಬಜೆಟ್ ಮಂಡಿಸಿದರೂ ಕುಡಿಯುವ ನೀರು ಕೊಡಲು ಸಾಧ್ಯವಾಗಿಲ್ಲ. ನಾನು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದರು.

ಎಟಿಎಂ ಕಾಂಗ್ರೆಸ್ ಸರ್ಕಾರ ಹೈಕಮಾಂಡ್ ಗೆ ಹಣ ಕಳುಹಿಸಲು ಟ್ಯಾಂಕರ್ ಮಾಫಿಯಾವನ್ನು ಬಳಸಿಕೊಂಡಿದೆ. ಕಾಂಗ್ರೆಸ್ ಸರ್ಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅನುದಾನದಲ್ಲಿ ಶೇ.25 ರಷ್ಟು ಕಡಿತ ಮಾಡಿ ಮೂಲಸೌಕರ್ಯ ಸಿಗದಂತೆ ಮಾಡಿದೆ. ಇದರ ಪ್ರತಿಫಲವಾಗಿ ಜನರಿಗೆ ಸರಿಯಾಗಿ ನೀರು ದೊರೆಯುತ್ತಿಲ್ಲ. ಸಿಎಂ ಸೂಚನೆಗೆ ಅಧಿಕಾರಿಗಳು ಬೆಲೆ ನೀಡದೆ ಕೈ ಚೆಲ್ಲಿದ್ದಾರೆ. ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ ಎಂದು ದೂರಿದರು.

ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿಚಾರದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ಅವರಂತೂ ಇದನ್ನು ನೇರವಾಗಿ ಒಪ್ಪಿಕೊಂಡಿದ್ದಾರೆ. ಕರ್ನಾಟಕದಲ್ಲಿ ದ್ವೇಷ ರಾಜಕಾರಣ ಈವರೆಗೆ ಇರಲಿಲ್ಲ. ದೂರುದಾರರು ಮಾನಸಿಕ ಅಸ್ವಸ್ಥೆ ಎಂದು ಗೃಹ ಸಚಿವರು ಹೇಳಿದ್ದರೂ, ಚುನಾವಣೆಯ ಬಳಿಕ ರಾಜಕೀಯ ದ್ವೇಷ ಸಾಧಿಸಲಾಗಿದೆ ಎಂದು ಆರ್‌. ಅಶೋಕ್‌ ದೂರಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

36 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

1 hour ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago