ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರುಣ ಕ್ಷೇತ್ರದಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಟ್ಯಾಂಕರ್ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಕೂಡ ಈ ಸರ್ಕಾರಕ್ಕಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಗಿನಡಿ ಅವರ ಕ್ಷೇತ್ರ ವರುಣದಲ್ಲಿ ಕಲುಷಿತ ನೀರನ್ನು ಜನರು ಸೇವಿಸಿ ಸಾವಿಗೀಡಾಗಿದ್ದಾರೆ. ಅಂದರೆ ಮುಖ್ಯಮಂತ್ರಿಗಳಿಗೆ ಕುಡಿಯುವ ನೀರು ನೀಡುವ ಯೋಗ್ಯತೆ ಇಲ್ಲ. ಈಗ ತುಮಕೂರಿನಲ್ಲೂ ಕಲುಷಿತ ನೀರು ಸೇವಿಸಿ ಆರು ಜನರ ಸಾವಾಗಿದೆ. ಇದಕ್ಕೆ ಜಿಲ್ಲಾಧಿಕಾರಿಯನ್ನು ಕೇಳಿದರೆ ಮೂತ್ರಪಿಂಡ ಸಮಸ್ಯೆ ಎಂದು ಕಾರಣ ಹೇಳಿದ್ದಾರೆ. ಆರೋಗ್ಯ ಸಮಸ್ಯೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಅದನ್ನೇ ಸಬೂಬು ಮಾಡಬಾರದು. ಈ ಕುರಿತು ವರದಿ ಕೇಳಿದ್ದೇನೆ ಎಂದರು.
ಕೊಪ್ಪಳದಲ್ಲಿ ಕೂಡ ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ್ದಾರೆ. ಕುಡಿಯುವ ನೀರಿನ ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಇದರಿಂದಲೇ ಜನರು ಕಲುಷಿತ ನೀರು ಕುಡಿಯಬೇಕಾಗಿದೆ. ಶಾಸಕರು ಅನುದಾನ ಕೇಳಿದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಯ್ಮುಚ್ಚಿಕೊಂಡು ಸುಮ್ಮನಿರಿ ಎಂದಿದ್ದಾರೆ. ಜನರ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ನೇರ ಕಾರಣ ಎಂದು ಕಿಡಿಕಾರಿದರು.
ಅಧಿಕಾರಿಗಳ ಬಳಿ ಈ ಬಗ್ಗೆ ಕಾರಣ ಕೇಳಿದರೆ ಜಾತ್ರೆಯಲ್ಲಿ ಅವಾಂತರವಾಗಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಯವರು 15 ಬಾರಿ ಬಜೆಟ್ ಮಂಡಿಸಿದರೂ ಕುಡಿಯುವ ನೀರು ಕೊಡಲು ಸಾಧ್ಯವಾಗಿಲ್ಲ. ನಾನು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದರು.
ಎಟಿಎಂ ಕಾಂಗ್ರೆಸ್ ಸರ್ಕಾರ ಹೈಕಮಾಂಡ್ ಗೆ ಹಣ ಕಳುಹಿಸಲು ಟ್ಯಾಂಕರ್ ಮಾಫಿಯಾವನ್ನು ಬಳಸಿಕೊಂಡಿದೆ. ಕಾಂಗ್ರೆಸ್ ಸರ್ಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅನುದಾನದಲ್ಲಿ ಶೇ.25 ರಷ್ಟು ಕಡಿತ ಮಾಡಿ ಮೂಲಸೌಕರ್ಯ ಸಿಗದಂತೆ ಮಾಡಿದೆ. ಇದರ ಪ್ರತಿಫಲವಾಗಿ ಜನರಿಗೆ ಸರಿಯಾಗಿ ನೀರು ದೊರೆಯುತ್ತಿಲ್ಲ. ಸಿಎಂ ಸೂಚನೆಗೆ ಅಧಿಕಾರಿಗಳು ಬೆಲೆ ನೀಡದೆ ಕೈ ಚೆಲ್ಲಿದ್ದಾರೆ. ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ ಎಂದು ದೂರಿದರು.
ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿಚಾರದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ಅವರಂತೂ ಇದನ್ನು ನೇರವಾಗಿ ಒಪ್ಪಿಕೊಂಡಿದ್ದಾರೆ. ಕರ್ನಾಟಕದಲ್ಲಿ ದ್ವೇಷ ರಾಜಕಾರಣ ಈವರೆಗೆ ಇರಲಿಲ್ಲ. ದೂರುದಾರರು ಮಾನಸಿಕ ಅಸ್ವಸ್ಥೆ ಎಂದು ಗೃಹ ಸಚಿವರು ಹೇಳಿದ್ದರೂ, ಚುನಾವಣೆಯ ಬಳಿಕ ರಾಜಕೀಯ ದ್ವೇಷ ಸಾಧಿಸಲಾಗಿದೆ ಎಂದು ಆರ್. ಅಶೋಕ್ ದೂರಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…