ರಾಜ್ಯ

ರಾಜಕೀಯ ಅಧಿಕಾರ ಹಿಡಿಯಲು ಅಂಬೇಡ್ಕರ್‌ ಹೆಸರು ಬಳಕೆ: ಸಿದ್ದರಾಮಯ್ಯ ವಿರುದ್ಧ ಆರ್‌.ಆಶೋಕ್‌ ವಾಗ್ದಾಳಿ

ಬೆಂಗಳೂರು: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಕುರಿತಂತೆ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಆ ಹೇಳಿಕೆ ವಿರೋಧಿಸಿ ಬಹಿರಂಗ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ ನಾಯಕ ಆರ್‌.ಆಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಸ್ಮರಣೆ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ ಎಂದು ಬಾಯಿ ಮಾತಿನಲ್ಲಿ ಹೇಳಿದರೆ ಸಾಲದು, ಅವರ ವಿಚಾರಧಾರೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಜಪವ ಮಾಡಿದರೇನು ತಪವ ಮಾಡಿದರೇನು ವಿಪರೀತ ಕಪಟಗುಣ ಕಲುಷವಿದ್ದವರು ಎಂಬ ಕನಕದಾಸರ ವಾಣಿಯಂತೆ ಬಾಯಿ ಮಾತಿಗೆ ಅವರ ಮೇಲೆ ತೋರಿಕೆ ಪ್ರೀತಿ ಮಾಡುವ ನಿಮ್ಮ ಮನಸ್ಥಿತಿಯನ್ನು ಬದಲಾಯಿಸಿ ಸಿಎಂ ಸಿದ್ದರಾಮಯ್ಯ ಎಂದು ಕಿಡಿಕಾರಿದ್ದಾರೆ.

ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಸೋಲಿಸಿದ, ಅವರ ಅಂತ್ಯ ಸಂಸ್ಕಾರಕ್ಕೆ ಚೂರು ಭೂಮಿ ನೀಡದ ಕಾಂಗ್ರೆಸ್‌ ಪಕ್ಷದ ಮಹಾ ಮೋಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಮಿತ್‌ ಶಾ ಅವರ ಭಾಷಣದ ವಿಡಿಯೋವನ್ನು ತಿರುಚಿ ಮತ್ತೊಮ್ಮೆ ಅವರಿಗೆ ಅವಮಾನಿಸುತ್ತಿದ್ದೀರಿ ಎಂದು ಆರೋಪಿಸಿದರು.

ಕಾಂಗ್ರೆಸ್‌ ಪಕ್ಷವು ತಮಗೆ ತಾವೇ ಭಾರತ ರತ್ನ ಪ್ರಶಸ್ತಿಯನ್ನು ಕೊಟ್ಟುಕೊಂಡಿದೆ. ಆದರೆ ಭಾರತ ದೇಶಕ್ಕಾಗಿ ಇಷ್ಟೊಂದು ಸೇವೆ ಮಾಡಿದ ಬಾಬಾ ಸಾಹೇಬ್‌ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ನಿರಾಕರಿಸಿತ್ತು. ಅವರಿಗೆ ಈ ಪರಮೋಚ್ಛ ಗೌರವ ಲಭಿಸಲು ಬಿಜೆಪಿ ಸರ್ಕಾರ ಕಾರಣ ಎಂದು ಹೇಳಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರಾರು ಕೋಟಿ ಖರ್ಚು ಮಾಡಿ ಸಿದ್ದರಾಮೋತ್ಸವ ಮಾಡಿಸಿಕೊಳ್ಳುತ್ತಾರೆ. ಆದರೆ ಅಂಬೇಡ್ಕರ್‌ ಉತ್ಸವ ಮಾಡಲು ಹಿಂದೇಟು ಹಾಕುತ್ತಾರೆ. ಅಂಬೇಡ್ಕರ್‌ ಅವರು ನೆನಪಾಗೋದು ಚುನಾವಣೆ ಸಂದರ್ಭದಲ್ಲಿ ಮಾತ್ರ. ರಾಜಕೀಯ ಅಧಿಕಾರ ಹಿಡಿಯಲು, ಹೈಕಮಾಂಡ್‌ ಮೆಚ್ಚಿಸಲು ಅವರ ಹೆಸರನ್ನು ಬಳಸಿಕೊಳ್ಳಲಾಗುತ್ತದೆ ಎಂದರು.

ಅಂಬೇಡ್ಕರ್‌ ಅವರ ಬಗ್ಗೆ ಬದ್ಧತೆ ಇದ್ದರೆ ಇಂದಿರಾ ಕ್ಯಾಂಟಿನ್‌ ಬದಲು ಅಂಬೇಡ್ಕರ್‌ ಕ್ಯಾಂಟಿನ್‌ ಎಂದು ಹೆಸರಿಡಬಹುದಿತ್ತಲ್ಲವೇ. ಆರೂವರೆ ವರ್ಷ ಮುಖ್ಯಮಂತ್ರಿ ಆಗಿರುವ ತಾವು ಯಾವುದಾದರೂ ಒಂದು ಯೋಜನೆಗೆ ಅಂಬೇಡ್ಕರ್‌ ಹೆಸರು ಇಟ್ಟಿದ್ದೀರಾ? ಎಂದು ಪ್ರಶ್ನಿಸಿದರು.

ಅಮಿತ್‌ ಶಾ ಅವರ ಭಾಷಣವನ್ನು ತಿರುಚಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಎಷ್ಟೇ ಮಾಡಿದರು, ಅಂಬೇಡ್ಕರ್‌ ಅವರಿಗೆ ನೀವು ಮಾಡಿರುವ ಅವಮಾನ, ಸಂವಿಧಾನದ ಬಗ್ಗೆ ನಿಮಗೆ ಇರುವ ಆಷಾಢಭೂತಿತನ ಮಾರೆಮಾಚಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.

ಆಂದೋಲನ ಡೆಸ್ಕ್

Recent Posts

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

5 mins ago

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ…

41 mins ago

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

2 hours ago

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

2 hours ago

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

4 hours ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

4 hours ago