ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಂತೆ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಆ ಹೇಳಿಕೆ ವಿರೋಧಿಸಿ ಬಹಿರಂಗ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಆಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಾಬಾಸಾಹೇಬ್ ಅಂಬೇಡ್ಕರ್ ಅವರ ಸ್ಮರಣೆ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ ಎಂದು ಬಾಯಿ ಮಾತಿನಲ್ಲಿ ಹೇಳಿದರೆ ಸಾಲದು, ಅವರ ವಿಚಾರಧಾರೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದ್ದಾರೆ.
ಜಪವ ಮಾಡಿದರೇನು ತಪವ ಮಾಡಿದರೇನು ವಿಪರೀತ ಕಪಟಗುಣ ಕಲುಷವಿದ್ದವರು ಎಂಬ ಕನಕದಾಸರ ವಾಣಿಯಂತೆ ಬಾಯಿ ಮಾತಿಗೆ ಅವರ ಮೇಲೆ ತೋರಿಕೆ ಪ್ರೀತಿ ಮಾಡುವ ನಿಮ್ಮ ಮನಸ್ಥಿತಿಯನ್ನು ಬದಲಾಯಿಸಿ ಸಿಎಂ ಸಿದ್ದರಾಮಯ್ಯ ಎಂದು ಕಿಡಿಕಾರಿದ್ದಾರೆ.
ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ, ಅವರ ಅಂತ್ಯ ಸಂಸ್ಕಾರಕ್ಕೆ ಚೂರು ಭೂಮಿ ನೀಡದ ಕಾಂಗ್ರೆಸ್ ಪಕ್ಷದ ಮಹಾ ಮೋಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಮಿತ್ ಶಾ ಅವರ ಭಾಷಣದ ವಿಡಿಯೋವನ್ನು ತಿರುಚಿ ಮತ್ತೊಮ್ಮೆ ಅವರಿಗೆ ಅವಮಾನಿಸುತ್ತಿದ್ದೀರಿ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷವು ತಮಗೆ ತಾವೇ ಭಾರತ ರತ್ನ ಪ್ರಶಸ್ತಿಯನ್ನು ಕೊಟ್ಟುಕೊಂಡಿದೆ. ಆದರೆ ಭಾರತ ದೇಶಕ್ಕಾಗಿ ಇಷ್ಟೊಂದು ಸೇವೆ ಮಾಡಿದ ಬಾಬಾ ಸಾಹೇಬ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ನಿರಾಕರಿಸಿತ್ತು. ಅವರಿಗೆ ಈ ಪರಮೋಚ್ಛ ಗೌರವ ಲಭಿಸಲು ಬಿಜೆಪಿ ಸರ್ಕಾರ ಕಾರಣ ಎಂದು ಹೇಳಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರಾರು ಕೋಟಿ ಖರ್ಚು ಮಾಡಿ ಸಿದ್ದರಾಮೋತ್ಸವ ಮಾಡಿಸಿಕೊಳ್ಳುತ್ತಾರೆ. ಆದರೆ ಅಂಬೇಡ್ಕರ್ ಉತ್ಸವ ಮಾಡಲು ಹಿಂದೇಟು ಹಾಕುತ್ತಾರೆ. ಅಂಬೇಡ್ಕರ್ ಅವರು ನೆನಪಾಗೋದು ಚುನಾವಣೆ ಸಂದರ್ಭದಲ್ಲಿ ಮಾತ್ರ. ರಾಜಕೀಯ ಅಧಿಕಾರ ಹಿಡಿಯಲು, ಹೈಕಮಾಂಡ್ ಮೆಚ್ಚಿಸಲು ಅವರ ಹೆಸರನ್ನು ಬಳಸಿಕೊಳ್ಳಲಾಗುತ್ತದೆ ಎಂದರು.
ಅಂಬೇಡ್ಕರ್ ಅವರ ಬಗ್ಗೆ ಬದ್ಧತೆ ಇದ್ದರೆ ಇಂದಿರಾ ಕ್ಯಾಂಟಿನ್ ಬದಲು ಅಂಬೇಡ್ಕರ್ ಕ್ಯಾಂಟಿನ್ ಎಂದು ಹೆಸರಿಡಬಹುದಿತ್ತಲ್ಲವೇ. ಆರೂವರೆ ವರ್ಷ ಮುಖ್ಯಮಂತ್ರಿ ಆಗಿರುವ ತಾವು ಯಾವುದಾದರೂ ಒಂದು ಯೋಜನೆಗೆ ಅಂಬೇಡ್ಕರ್ ಹೆಸರು ಇಟ್ಟಿದ್ದೀರಾ? ಎಂದು ಪ್ರಶ್ನಿಸಿದರು.
ಅಮಿತ್ ಶಾ ಅವರ ಭಾಷಣವನ್ನು ತಿರುಚಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಎಷ್ಟೇ ಮಾಡಿದರು, ಅಂಬೇಡ್ಕರ್ ಅವರಿಗೆ ನೀವು ಮಾಡಿರುವ ಅವಮಾನ, ಸಂವಿಧಾನದ ಬಗ್ಗೆ ನಿಮಗೆ ಇರುವ ಆಷಾಢಭೂತಿತನ ಮಾರೆಮಾಚಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…