ರಾಜ್ಯ

ರಾಜಕೀಯ ಅಧಿಕಾರ ಹಿಡಿಯಲು ಅಂಬೇಡ್ಕರ್‌ ಹೆಸರು ಬಳಕೆ: ಸಿದ್ದರಾಮಯ್ಯ ವಿರುದ್ಧ ಆರ್‌.ಆಶೋಕ್‌ ವಾಗ್ದಾಳಿ

ಬೆಂಗಳೂರು: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಕುರಿತಂತೆ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಆ ಹೇಳಿಕೆ ವಿರೋಧಿಸಿ ಬಹಿರಂಗ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ ನಾಯಕ ಆರ್‌.ಆಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಸ್ಮರಣೆ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ ಎಂದು ಬಾಯಿ ಮಾತಿನಲ್ಲಿ ಹೇಳಿದರೆ ಸಾಲದು, ಅವರ ವಿಚಾರಧಾರೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಜಪವ ಮಾಡಿದರೇನು ತಪವ ಮಾಡಿದರೇನು ವಿಪರೀತ ಕಪಟಗುಣ ಕಲುಷವಿದ್ದವರು ಎಂಬ ಕನಕದಾಸರ ವಾಣಿಯಂತೆ ಬಾಯಿ ಮಾತಿಗೆ ಅವರ ಮೇಲೆ ತೋರಿಕೆ ಪ್ರೀತಿ ಮಾಡುವ ನಿಮ್ಮ ಮನಸ್ಥಿತಿಯನ್ನು ಬದಲಾಯಿಸಿ ಸಿಎಂ ಸಿದ್ದರಾಮಯ್ಯ ಎಂದು ಕಿಡಿಕಾರಿದ್ದಾರೆ.

ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಸೋಲಿಸಿದ, ಅವರ ಅಂತ್ಯ ಸಂಸ್ಕಾರಕ್ಕೆ ಚೂರು ಭೂಮಿ ನೀಡದ ಕಾಂಗ್ರೆಸ್‌ ಪಕ್ಷದ ಮಹಾ ಮೋಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಮಿತ್‌ ಶಾ ಅವರ ಭಾಷಣದ ವಿಡಿಯೋವನ್ನು ತಿರುಚಿ ಮತ್ತೊಮ್ಮೆ ಅವರಿಗೆ ಅವಮಾನಿಸುತ್ತಿದ್ದೀರಿ ಎಂದು ಆರೋಪಿಸಿದರು.

ಕಾಂಗ್ರೆಸ್‌ ಪಕ್ಷವು ತಮಗೆ ತಾವೇ ಭಾರತ ರತ್ನ ಪ್ರಶಸ್ತಿಯನ್ನು ಕೊಟ್ಟುಕೊಂಡಿದೆ. ಆದರೆ ಭಾರತ ದೇಶಕ್ಕಾಗಿ ಇಷ್ಟೊಂದು ಸೇವೆ ಮಾಡಿದ ಬಾಬಾ ಸಾಹೇಬ್‌ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ನಿರಾಕರಿಸಿತ್ತು. ಅವರಿಗೆ ಈ ಪರಮೋಚ್ಛ ಗೌರವ ಲಭಿಸಲು ಬಿಜೆಪಿ ಸರ್ಕಾರ ಕಾರಣ ಎಂದು ಹೇಳಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರಾರು ಕೋಟಿ ಖರ್ಚು ಮಾಡಿ ಸಿದ್ದರಾಮೋತ್ಸವ ಮಾಡಿಸಿಕೊಳ್ಳುತ್ತಾರೆ. ಆದರೆ ಅಂಬೇಡ್ಕರ್‌ ಉತ್ಸವ ಮಾಡಲು ಹಿಂದೇಟು ಹಾಕುತ್ತಾರೆ. ಅಂಬೇಡ್ಕರ್‌ ಅವರು ನೆನಪಾಗೋದು ಚುನಾವಣೆ ಸಂದರ್ಭದಲ್ಲಿ ಮಾತ್ರ. ರಾಜಕೀಯ ಅಧಿಕಾರ ಹಿಡಿಯಲು, ಹೈಕಮಾಂಡ್‌ ಮೆಚ್ಚಿಸಲು ಅವರ ಹೆಸರನ್ನು ಬಳಸಿಕೊಳ್ಳಲಾಗುತ್ತದೆ ಎಂದರು.

ಅಂಬೇಡ್ಕರ್‌ ಅವರ ಬಗ್ಗೆ ಬದ್ಧತೆ ಇದ್ದರೆ ಇಂದಿರಾ ಕ್ಯಾಂಟಿನ್‌ ಬದಲು ಅಂಬೇಡ್ಕರ್‌ ಕ್ಯಾಂಟಿನ್‌ ಎಂದು ಹೆಸರಿಡಬಹುದಿತ್ತಲ್ಲವೇ. ಆರೂವರೆ ವರ್ಷ ಮುಖ್ಯಮಂತ್ರಿ ಆಗಿರುವ ತಾವು ಯಾವುದಾದರೂ ಒಂದು ಯೋಜನೆಗೆ ಅಂಬೇಡ್ಕರ್‌ ಹೆಸರು ಇಟ್ಟಿದ್ದೀರಾ? ಎಂದು ಪ್ರಶ್ನಿಸಿದರು.

ಅಮಿತ್‌ ಶಾ ಅವರ ಭಾಷಣವನ್ನು ತಿರುಚಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಎಷ್ಟೇ ಮಾಡಿದರು, ಅಂಬೇಡ್ಕರ್‌ ಅವರಿಗೆ ನೀವು ಮಾಡಿರುವ ಅವಮಾನ, ಸಂವಿಧಾನದ ಬಗ್ಗೆ ನಿಮಗೆ ಇರುವ ಆಷಾಢಭೂತಿತನ ಮಾರೆಮಾಚಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

4 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

6 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

20 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

24 hours ago