ಬೆಂಗಳೂರು: ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ವಿಪಕ್ಷ ನಾಯಕರ ತೇಜೋವಧೆಯ ಹುನ್ನಾರಕ್ಕೆ ಪ್ರಯತ್ನ ಮಾಡುತ್ತಿದೆ ಎಂದು ವಿರೋಧದ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳು ಮತ್ತು ಹಗರಣಗಳಿಂದ ಜನರ ಗಮನ ಬೇರೆಡೆ ಸೆಳೆಯಲು ವಿಪಕ್ಷ ನಾಯಕರ ತೇಜೋವಧೆ ಮಾಡುವ ಹುನ್ನಾರ ನಡೆಸಿದೆ. ಅದಕ್ಕೆ ಪೂರಕವಾಗುವಂತೆ ಬಸ್ ದರ ಏರಿಕೆ ವಿರುದ್ಧ ನಿನ್ನೆ(ಜ.3) ಪ್ರತಿಭಟನೆ ಮಾಡುತ್ತಿರುವ ವೇಳೆ ಪೊಲೀಸರೊಂದಿಗೆ ನನ್ನ ವಾಗ್ವಾದದ ವಿಡಿಯೋ ತುಣುಕನ್ನು ಕಟ್ ಮಾಡಿ, ಎಡಿಟ್ ಮಾಡಿ ಹರಿಬಿಟ್ಟಿರುವುದು ಈ ಷಡ್ಯಂತ್ರದ ಭಾಗವೇ ಆಗಿದೆ ಎಂದು ಕಿಡಿಕಾರಿದೆ.
ಕಾಂಗ್ರೆಸ್ ಪಕ್ಷದ ಈ ಕುತಂತ್ರದ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ಸಲ್ಲಿಸಲಾಗಿದ್ದು, ನನ್ನ ತೇಜೋವಧೆ ಮಾಡಲು ಪ್ರಯತ್ನಿಸಿದ ತಪ್ಪಿತಸ್ಥರಿಗೆ ಶಿಕ್ಷೆ ಆಗುವವರೆಗೂ ಕಾನೂನು ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…