ಬೆಂಗಳೂರು: ಬಿಜೆಪಿ ನಡೆಸುತ್ತಿರುವ ಭೀಮ ಹೆಜ್ಜೆ ಯಾತ್ರೆ ಬಿಜೆಪಿಗರ ಅನೈತಿಕ ಯಾತ್ರೆಯಾಗಿದೆ ಎಂದು ಹೇಳಿದ್ದ ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರ ಸೋಲಿಗೆ ಎಲ್ಲಾ ಬಗೆಯ ತಂತ್ರಗಾರಿಕೆಯನ್ನು ಹೆಣೆದಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರನ್ನು ಸೋಲಿಸಲು ನಾರಾಯಣ ಸದೋಬಾ ಕರ್ಜೋಲ್ಕರ್ಗೆ ಸಂಪನ್ಮೂಲ ಒದಗಿಸಿದ್ದು ಕೂಡ ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರನ್ನು ಸೋಲಿಸಿದ್ದಕ್ಕಾಗಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಬಹುಮಾನ ಕೊಟ್ಟಿದ್ದೂ ಕೂಡ ಕಾಂಗ್ರೆಸ್ ಪಕ್ಷವೇ ಎಂದು ಕಿಡಿಕಾರಿದ್ದಾರೆ.
ಅಂಬೇಡ್ಕರ್ ಅವರ ಸೋಲಿಗೆ ಇಷ್ಟೆಲ್ಲಾ ಕುತಂತ್ರ, ಹುನ್ನಾರ ಮಾಡಿ ಅವರಿಗೆ ಭಾರತ ರತ್ನವನ್ನು ನಿರಾಕರಣೆ ಮಾಡಿದ ಕಾಂಗ್ರೆಸ್ ಪಕ್ಷ ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಲು ವೀರ ಸಾವರ್ಕರ್ ಸಂಚು ಮಾಡಿದ್ದರು ಎಂದು ಹೇಳುವುದು ನಾಚಿಕೆಗೇಡಿನ ಪರಮಾವಧಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…