ಬೆಂಗಳೂರು: ಬಿಜೆಪಿ ನಡೆಸುತ್ತಿರುವ ಭೀಮ ಹೆಜ್ಜೆ ಯಾತ್ರೆ ಬಿಜೆಪಿಗರ ಅನೈತಿಕ ಯಾತ್ರೆಯಾಗಿದೆ ಎಂದು ಹೇಳಿದ್ದ ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರ ಸೋಲಿಗೆ ಎಲ್ಲಾ ಬಗೆಯ ತಂತ್ರಗಾರಿಕೆಯನ್ನು ಹೆಣೆದಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರನ್ನು ಸೋಲಿಸಲು ನಾರಾಯಣ ಸದೋಬಾ ಕರ್ಜೋಲ್ಕರ್ಗೆ ಸಂಪನ್ಮೂಲ ಒದಗಿಸಿದ್ದು ಕೂಡ ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರನ್ನು ಸೋಲಿಸಿದ್ದಕ್ಕಾಗಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಬಹುಮಾನ ಕೊಟ್ಟಿದ್ದೂ ಕೂಡ ಕಾಂಗ್ರೆಸ್ ಪಕ್ಷವೇ ಎಂದು ಕಿಡಿಕಾರಿದ್ದಾರೆ.
ಅಂಬೇಡ್ಕರ್ ಅವರ ಸೋಲಿಗೆ ಇಷ್ಟೆಲ್ಲಾ ಕುತಂತ್ರ, ಹುನ್ನಾರ ಮಾಡಿ ಅವರಿಗೆ ಭಾರತ ರತ್ನವನ್ನು ನಿರಾಕರಣೆ ಮಾಡಿದ ಕಾಂಗ್ರೆಸ್ ಪಕ್ಷ ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಲು ವೀರ ಸಾವರ್ಕರ್ ಸಂಚು ಮಾಡಿದ್ದರು ಎಂದು ಹೇಳುವುದು ನಾಚಿಕೆಗೇಡಿನ ಪರಮಾವಧಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…