ಬೆಂಗಳೂರು: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯಾಗಿ ಒಂದು ವರ್ಷ ಕಳೆದರೂ ಕೆಲ ಕಾಂಗ್ರೆಸ್ ನಾಯಕರಿಗೆ ಈಗಲೂ ಅದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಚಿವ ಮಹದೇವಪ್ಪ ಅವರೇ ಹಿಂದುಗಳ ಒಗ್ಗಟ್ಟು, ಹಿಂದುಗಳ ಸಂಭ್ರಮ ಕಂಡರೆ ನಿಮಗೆ ಯಾಕಿಷ್ಟು ಅಸೂಯೆ? ಆದಿಕವಿ ಮಹರ್ಷಿ ವಾಲ್ಮೀಕಿಯ ಶ್ರೀರಾಮನೇ ಬೇರೆ, ಅಯೋಧ್ಯೆಯ ಶ್ರೀರಾಮನೇ ಬೇರೆ ಎಂದು ಹೇಳಿದ್ದೀರಲ್ಲ. ಹಾಗಾದರೆ ರಾಷ್ಟ್ರಕವಿ ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಕೃತಿಯಲ್ಲಿ ಬರುವ ರಾಮ ಯಾರು? ವಾಲ್ಮೀಕಿ ರಾಮನೋ ಅಥವಾ ಅಯೋಧ್ಯೆಯ ರಾಮನೋ ಎಂದು ಪ್ರಶ್ನೆ ಮಾಡಿದರು.
ಹಿಂದುಗಳ ಒಗ್ಗಟ್ಟು ಒಡೆಯುವ, ಹಿಂದು ಸಮಾಜದಲ್ಲಿ ಒಡಕು ಮೂಡಿಸುವ ಈ ಕಮ್ಯುನಿಸ್ಟ್ ಸಿದ್ಧಾಂತಗಳಿಎ ನವಭಾರತದಲ್ಲಿ ಜಾಗವಿಲ್ಲ. ಎಡಪಂಥೀಯ ವಿಚಾರಧಾರೆಯಿಂದ ಪ್ರಣೀತರಾದ ಇಂತಹ ಕಪೋಲಕಲ್ಪಿತ ಕಟ್ಟುಕಥೆಗಳನ್ನು ವಿತಂಡವಾದವನ್ನು ನಂಬುವವರೂ ಇಲ್ಲ.
ನಿಮ್ಮ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದುಗಳ ಶ್ರದ್ಧೆ, ನಂಬಿಕೆಗಳ ಜೊತೆ ಚೆಲ್ಲಾಟವಾಡುವುದನ್ನು ಬಿಟ್ಟುಬಿಡಿ ಎಂದು ಕಿಡಿಕಾರಿದರು.
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…