ರಾಜ್ಯ

ಹಿಂದುಗಳ ಶ್ರದ್ಧೆ, ನಂಬಿಕೆಗಳ ಜೊತೆ ಚೆಲ್ಲಾಟವಾಡಬೇಡಿ: ಸಚಿವ ಮಹದೇವಪ್ಪ ವಿರುದ್ಧ ಆರ್.‌ಅಶೋಕ್‌ ಕಿಡಿ

ಬೆಂಗಳೂರು: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯಾಗಿ ಒಂದು ವರ್ಷ ಕಳೆದರೂ ಕೆಲ ಕಾಂಗ್ರೆಸ್‌ ನಾಯಕರಿಗೆ ಈಗಲೂ ಅದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಚಿವ ಮಹದೇವಪ್ಪ ಅವರೇ ಹಿಂದುಗಳ ಒಗ್ಗಟ್ಟು, ಹಿಂದುಗಳ ಸಂಭ್ರಮ ಕಂಡರೆ ನಿಮಗೆ ಯಾಕಿಷ್ಟು ಅಸೂಯೆ? ಆದಿಕವಿ ಮಹರ್ಷಿ ವಾಲ್ಮೀಕಿಯ ಶ್ರೀರಾಮನೇ ಬೇರೆ, ಅಯೋಧ್ಯೆಯ ಶ್ರೀರಾಮನೇ ಬೇರೆ ಎಂದು ಹೇಳಿದ್ದೀರಲ್ಲ. ಹಾಗಾದರೆ ರಾಷ್ಟ್ರಕವಿ ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಕೃತಿಯಲ್ಲಿ ಬರುವ ರಾಮ ಯಾರು? ವಾಲ್ಮೀಕಿ ರಾಮನೋ ಅಥವಾ ಅಯೋಧ್ಯೆಯ ರಾಮನೋ ಎಂದು ಪ್ರಶ್ನೆ ಮಾಡಿದರು.

ಹಿಂದುಗಳ ಒಗ್ಗಟ್ಟು ಒಡೆಯುವ, ಹಿಂದು ಸಮಾಜದಲ್ಲಿ ಒಡಕು ಮೂಡಿಸುವ ಈ ಕಮ್ಯುನಿಸ್ಟ್‌ ಸಿದ್ಧಾಂತಗಳಿಎ ನವಭಾರತದಲ್ಲಿ ಜಾಗವಿಲ್ಲ. ಎಡಪಂಥೀಯ ವಿಚಾರಧಾರೆಯಿಂದ ಪ್ರಣೀತರಾದ ಇಂತಹ ಕಪೋಲಕಲ್ಪಿತ ಕಟ್ಟುಕಥೆಗಳನ್ನು ವಿತಂಡವಾದವನ್ನು ನಂಬುವವರೂ ಇಲ್ಲ.

ನಿಮ್ಮ ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ಹಿಂದುಗಳ ಶ್ರದ್ಧೆ, ನಂಬಿಕೆಗಳ ಜೊತೆ ಚೆಲ್ಲಾಟವಾಡುವುದನ್ನು ಬಿಟ್ಟುಬಿಡಿ ಎಂದು ಕಿಡಿಕಾರಿದರು.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

1 hour ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

1 hour ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

1 hour ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

1 hour ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago