ರಾಜ್ಯ

ಬಿಜೆಪಿಗೆ ನೀಲಿ ಶಾಲು ಧರಿಸುವುದು ಈಗ ಹೊಸ ಫ್ಯಾಷನ್‌ವೆಂಬ ಪ್ರಿಯಾಂಕ್‌ ಖರ್ಗೆ ಟ್ವೀಟ್‌: ಆರ್.ಅಶೋಕ್‌ ತಿರುಗೇಟು

ಬೆಂಗಳೂರು: ಬಿಜೆಪಿಗೆ ನೀಲಿ ಶಾಲು ಧರಿಸುವುದು ಈಗ ಹೊಸ ಫ್ಯಾಷನ್‌ ಎಂಬ ಹೇಳಿಕೆ ನೀಡಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್‌ ಮಾಡಿ ವ್ಯಂಗ್ಯ ಮಾಡಿದ್ದು, ಇದೀಗ ವಿಪಕ್ಷ ನಾಯಕ ಆರ್‌.ಅಶೋಕ್‌ ಟ್ವೀಟ್‌ ಮೂಲಕವೇ ತಿರುಗೇಟು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯ ಮೂಲಕ ಟ್ವೀಟ್‌ ಮಾಡಿರುವ ಅವರು, ಸಚಿವ ಪ್ರಿಯಾಂಕ್‌ ಖರ್ಗೆ ಅವರೇ ನಾವು ನಿಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷದವರ ರೀತಿ ಎಲೆಕ್ಷನ್ ಹಿಂದೂಗಳು ಅಲ್ಲ, ಎಲೆಕ್ಷನ್ ಅಂಬೇಡ್ಕರ್ ವಾದಿಗಳೂ ಅಲ್ಲ. ಅಲ್ಲದೇ ತಾವು ಹೇಳಿಕೊಳ್ಳುವಂತೆ ತಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷದವರು ನಿಜವಾಗಿಯೂ ಅಂಬೇಡ್ಕರ್ ವಾದಿಗಳಾಗಿದ್ದಾರೆ ನೆಹರು ಅವರಾಗಲಿ, ಇಂದಿರಾ ಗಾಂಧಿ ಅವರಾಗಲಿ ಅಥವಾ ರಾಜೀವ್ ಗಾಂಧಿ ಅವರಾಗಲಿ ನೀಲಿ ಶಾಲು ಧರಿಸಿದ್ದ ಒಂದೇ ಒಂದು ಫೋಟೋ ತೋರಿಸಿ ನೋಡೋಣ ಎಂದು ಸವಾಲ್‌ ಹಾಕಿದ್ದಾರೆ.

ಪಾಪ ನಿಮ್ಮ ನಕಲಿ ಗಾಂಧಿ ಪಕ್ಷದ ಥರ್ಡ್ ಟೈಂ ಫೇಲ್ ಸ್ಟಾರ್ ಕಾಮಿಡಿಯನ್ ಚುನಾವಣೆ ಬಂದಾಗಲೆಲ್ಲಾ ಕೇಸರಿ ಬಟ್ಟೆ, ಕೇಸರಿ ಶಾಲು, ಹಣೆಗೆ ವಿಭೂತಿ, ಕುಂಕುಮ ಹಚ್ಚಿಕೊಂಡು ದೇವಸ್ಥಾನಕ್ಕೆ ಹೋಗುತ್ತಾರೆ. ಅದು ಹೋಗಲಿ ಬಿಡಿ, ತಾನು ಕೌಲ ದತ್ತಾತ್ರೇಯ ಗೋತ್ರದ ಬ್ರಾಹ್ಮಣ ಎಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ಮುತ್ತಜ್ಜ ನೆಹರೂ ಅವರಾಗಲಿ, ಅಜ್ಜಿ ಇಂದಿರಾ ಗಾಂಧಿ ಅವರಾಗಲಿ, ಅಪ್ಪ ರಾಜೀವ್ ಗಾಂಧಿ ಅವರಾಗಲಿ ಹಾಗೂ ಅಮ್ಮ ಸೋನಿಯಾ ಗಾಂಧಿ ಅವರಾಗಲಿ ಒಂದು ದಿನವೂ ಕೇಸರಿ, ಕುಂಕುಮ, ಗುಡಿ ಗೋಪುರಗಳ ಹತ್ತಿರವೂ ಸುಳಿದಿದ್ದನ್ನು ನಾನಂತೂ ಕಂಡಿಲ್ಲ. ನೀವೇನಾದರೂ ಕಂಡಿದ್ದರೆ ಒಂದು ಫೋಟೋ ತೋರಿಸಿ ಎಂದು ವಾಗ್ದಾಳಿ ಮಾಡಿದ್ದಾರೆ.

ಇನ್ನು ಅಂಬೇಡ್ಕರ್ ಅವರನ್ನ ನಿಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷ ಹೇಗೆ ನಡೆಸಿಕೊಂಡಿತು ಎಂದು ಮತ್ತೆ ಮತ್ತೆ ಹೇಳಬೇಕಾಗಿಲ್ಲ. ಇತ್ತೀಚೆಗೆ ಸಂಸತ್ತಿನಲ್ಲಿ ಸಂವಿಧಾನದ ಬಗ್ಗೆ ನಡೆದ ಚರ್ಚೆಯಲ್ಲಿ ಎಲ್ಲವೂ ಶಾಶ್ವತವಾಗಿ ದಾಖಲಾಗಿದೆ. ಕಂಟ್ರಾಕ್ಟರ್‌ಗಳ ಆತ್ಮಹತ್ಯೆ, ಡಿನ್ನರ್ ಮೀಟಿಂಗ್ ಇವೆಲ್ಲಾ ಗೊಜಲುಗಳಿಂದ ಬಿಡುವಿದ್ದಾಗ ಒಮ್ಮೆ ಆ ಚರ್ಚ್‌ಗಳನ್ನು ಓದಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಚುನಾವಣಾ ಭಾಷಣಗಳಲ್ಲಿ ಮೀಸಲಾತಿ ಪರವಾಗಿ ಮೊಸಳೆ ಕಣ್ಣೀರು ಸುರಿಸುವುದು, ವಿದೇಶಿ ವೇದಿಕೆಗಳಲ್ಲಿ ಮೀಸಲಾತಿ ವಿರುದ್ಧವಾಗಿ ಮಾತನಾಡುವ ಡೋಂಗಿ ಅಂಬೇಡ್ಕರ್ ವಾದ ಅಲ್ಲ ನಮ್ಮದು. ಬಾಬಾ ಸಾಹೇಬ್ ಅಂಬೇಡ್ಕರರ ಸಿದ್ಧಾಂತಕ್ಕೆ ಸಮನಾದ ಸಿದ್ಧಾಂತ ಯಾವುದಾದರೂ ಇದ್ದರೆ ಅದು ಬಿಜೆಪಿಯ ಏಕಾತ್ಮ ಮಾನವತಾವಾದ ಮತ್ತು ಅಂತ್ಯೋದಯ ಎಂದು ಹೇಳಿದ್ದಾರೆ.

ಮಹಾತ್ಮ ಗಾಂಧೀಜಿ ಅವರು ವಿಸರ್ಜನೆ ಮಾಡಬೇಕು ಅಂದ ಮೇಲೂ ಅಧಿಕಾರಕ್ಕಾಗಿ ಒಂದು ಕುಟುಂಬದ ಆಸ್ತಿಯಾಗಿ ಉಳಿದುಕೊಂಡಿರುವ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷದ ಏಕೈಕ ಸಿದ್ಧಾಂತ ಅಂದರೆ ಅದು ಅಧಿಕಾರವಾದ. ಅಧಿಕಾರಕ್ಕಾಗಿ ಲಜ್ಜೆ ಇಲ್ಲದ ಅವಕಾಶವಾದ. ಮಿಕ್ಕಿದ್ದೆಲ್ಲ ಬರೀ ಬೊಗಳೆ ಎಂದು ಆರೋಪಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…

20 mins ago

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

56 mins ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

2 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

3 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

3 hours ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

4 hours ago