ರಾಜ್ಯ

ಬಿಜೆಪಿಗೆ ನೀಲಿ ಶಾಲು ಧರಿಸುವುದು ಈಗ ಹೊಸ ಫ್ಯಾಷನ್‌ವೆಂಬ ಪ್ರಿಯಾಂಕ್‌ ಖರ್ಗೆ ಟ್ವೀಟ್‌: ಆರ್.ಅಶೋಕ್‌ ತಿರುಗೇಟು

ಬೆಂಗಳೂರು: ಬಿಜೆಪಿಗೆ ನೀಲಿ ಶಾಲು ಧರಿಸುವುದು ಈಗ ಹೊಸ ಫ್ಯಾಷನ್‌ ಎಂಬ ಹೇಳಿಕೆ ನೀಡಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್‌ ಮಾಡಿ ವ್ಯಂಗ್ಯ ಮಾಡಿದ್ದು, ಇದೀಗ ವಿಪಕ್ಷ ನಾಯಕ ಆರ್‌.ಅಶೋಕ್‌ ಟ್ವೀಟ್‌ ಮೂಲಕವೇ ತಿರುಗೇಟು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯ ಮೂಲಕ ಟ್ವೀಟ್‌ ಮಾಡಿರುವ ಅವರು, ಸಚಿವ ಪ್ರಿಯಾಂಕ್‌ ಖರ್ಗೆ ಅವರೇ ನಾವು ನಿಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷದವರ ರೀತಿ ಎಲೆಕ್ಷನ್ ಹಿಂದೂಗಳು ಅಲ್ಲ, ಎಲೆಕ್ಷನ್ ಅಂಬೇಡ್ಕರ್ ವಾದಿಗಳೂ ಅಲ್ಲ. ಅಲ್ಲದೇ ತಾವು ಹೇಳಿಕೊಳ್ಳುವಂತೆ ತಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷದವರು ನಿಜವಾಗಿಯೂ ಅಂಬೇಡ್ಕರ್ ವಾದಿಗಳಾಗಿದ್ದಾರೆ ನೆಹರು ಅವರಾಗಲಿ, ಇಂದಿರಾ ಗಾಂಧಿ ಅವರಾಗಲಿ ಅಥವಾ ರಾಜೀವ್ ಗಾಂಧಿ ಅವರಾಗಲಿ ನೀಲಿ ಶಾಲು ಧರಿಸಿದ್ದ ಒಂದೇ ಒಂದು ಫೋಟೋ ತೋರಿಸಿ ನೋಡೋಣ ಎಂದು ಸವಾಲ್‌ ಹಾಕಿದ್ದಾರೆ.

ಪಾಪ ನಿಮ್ಮ ನಕಲಿ ಗಾಂಧಿ ಪಕ್ಷದ ಥರ್ಡ್ ಟೈಂ ಫೇಲ್ ಸ್ಟಾರ್ ಕಾಮಿಡಿಯನ್ ಚುನಾವಣೆ ಬಂದಾಗಲೆಲ್ಲಾ ಕೇಸರಿ ಬಟ್ಟೆ, ಕೇಸರಿ ಶಾಲು, ಹಣೆಗೆ ವಿಭೂತಿ, ಕುಂಕುಮ ಹಚ್ಚಿಕೊಂಡು ದೇವಸ್ಥಾನಕ್ಕೆ ಹೋಗುತ್ತಾರೆ. ಅದು ಹೋಗಲಿ ಬಿಡಿ, ತಾನು ಕೌಲ ದತ್ತಾತ್ರೇಯ ಗೋತ್ರದ ಬ್ರಾಹ್ಮಣ ಎಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ಮುತ್ತಜ್ಜ ನೆಹರೂ ಅವರಾಗಲಿ, ಅಜ್ಜಿ ಇಂದಿರಾ ಗಾಂಧಿ ಅವರಾಗಲಿ, ಅಪ್ಪ ರಾಜೀವ್ ಗಾಂಧಿ ಅವರಾಗಲಿ ಹಾಗೂ ಅಮ್ಮ ಸೋನಿಯಾ ಗಾಂಧಿ ಅವರಾಗಲಿ ಒಂದು ದಿನವೂ ಕೇಸರಿ, ಕುಂಕುಮ, ಗುಡಿ ಗೋಪುರಗಳ ಹತ್ತಿರವೂ ಸುಳಿದಿದ್ದನ್ನು ನಾನಂತೂ ಕಂಡಿಲ್ಲ. ನೀವೇನಾದರೂ ಕಂಡಿದ್ದರೆ ಒಂದು ಫೋಟೋ ತೋರಿಸಿ ಎಂದು ವಾಗ್ದಾಳಿ ಮಾಡಿದ್ದಾರೆ.

ಇನ್ನು ಅಂಬೇಡ್ಕರ್ ಅವರನ್ನ ನಿಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷ ಹೇಗೆ ನಡೆಸಿಕೊಂಡಿತು ಎಂದು ಮತ್ತೆ ಮತ್ತೆ ಹೇಳಬೇಕಾಗಿಲ್ಲ. ಇತ್ತೀಚೆಗೆ ಸಂಸತ್ತಿನಲ್ಲಿ ಸಂವಿಧಾನದ ಬಗ್ಗೆ ನಡೆದ ಚರ್ಚೆಯಲ್ಲಿ ಎಲ್ಲವೂ ಶಾಶ್ವತವಾಗಿ ದಾಖಲಾಗಿದೆ. ಕಂಟ್ರಾಕ್ಟರ್‌ಗಳ ಆತ್ಮಹತ್ಯೆ, ಡಿನ್ನರ್ ಮೀಟಿಂಗ್ ಇವೆಲ್ಲಾ ಗೊಜಲುಗಳಿಂದ ಬಿಡುವಿದ್ದಾಗ ಒಮ್ಮೆ ಆ ಚರ್ಚ್‌ಗಳನ್ನು ಓದಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಚುನಾವಣಾ ಭಾಷಣಗಳಲ್ಲಿ ಮೀಸಲಾತಿ ಪರವಾಗಿ ಮೊಸಳೆ ಕಣ್ಣೀರು ಸುರಿಸುವುದು, ವಿದೇಶಿ ವೇದಿಕೆಗಳಲ್ಲಿ ಮೀಸಲಾತಿ ವಿರುದ್ಧವಾಗಿ ಮಾತನಾಡುವ ಡೋಂಗಿ ಅಂಬೇಡ್ಕರ್ ವಾದ ಅಲ್ಲ ನಮ್ಮದು. ಬಾಬಾ ಸಾಹೇಬ್ ಅಂಬೇಡ್ಕರರ ಸಿದ್ಧಾಂತಕ್ಕೆ ಸಮನಾದ ಸಿದ್ಧಾಂತ ಯಾವುದಾದರೂ ಇದ್ದರೆ ಅದು ಬಿಜೆಪಿಯ ಏಕಾತ್ಮ ಮಾನವತಾವಾದ ಮತ್ತು ಅಂತ್ಯೋದಯ ಎಂದು ಹೇಳಿದ್ದಾರೆ.

ಮಹಾತ್ಮ ಗಾಂಧೀಜಿ ಅವರು ವಿಸರ್ಜನೆ ಮಾಡಬೇಕು ಅಂದ ಮೇಲೂ ಅಧಿಕಾರಕ್ಕಾಗಿ ಒಂದು ಕುಟುಂಬದ ಆಸ್ತಿಯಾಗಿ ಉಳಿದುಕೊಂಡಿರುವ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷದ ಏಕೈಕ ಸಿದ್ಧಾಂತ ಅಂದರೆ ಅದು ಅಧಿಕಾರವಾದ. ಅಧಿಕಾರಕ್ಕಾಗಿ ಲಜ್ಜೆ ಇಲ್ಲದ ಅವಕಾಶವಾದ. ಮಿಕ್ಕಿದ್ದೆಲ್ಲ ಬರೀ ಬೊಗಳೆ ಎಂದು ಆರೋಪಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

3 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

3 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

3 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

3 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

3 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

3 hours ago