ರಾಜ್ಯ

ಬಿಜೆಪಿಗೆ ನೀಲಿ ಶಾಲು ಧರಿಸುವುದು ಈಗ ಹೊಸ ಫ್ಯಾಷನ್‌ವೆಂಬ ಪ್ರಿಯಾಂಕ್‌ ಖರ್ಗೆ ಟ್ವೀಟ್‌: ಆರ್.ಅಶೋಕ್‌ ತಿರುಗೇಟು

ಬೆಂಗಳೂರು: ಬಿಜೆಪಿಗೆ ನೀಲಿ ಶಾಲು ಧರಿಸುವುದು ಈಗ ಹೊಸ ಫ್ಯಾಷನ್‌ ಎಂಬ ಹೇಳಿಕೆ ನೀಡಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್‌ ಮಾಡಿ ವ್ಯಂಗ್ಯ ಮಾಡಿದ್ದು, ಇದೀಗ ವಿಪಕ್ಷ ನಾಯಕ ಆರ್‌.ಅಶೋಕ್‌ ಟ್ವೀಟ್‌ ಮೂಲಕವೇ ತಿರುಗೇಟು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯ ಮೂಲಕ ಟ್ವೀಟ್‌ ಮಾಡಿರುವ ಅವರು, ಸಚಿವ ಪ್ರಿಯಾಂಕ್‌ ಖರ್ಗೆ ಅವರೇ ನಾವು ನಿಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷದವರ ರೀತಿ ಎಲೆಕ್ಷನ್ ಹಿಂದೂಗಳು ಅಲ್ಲ, ಎಲೆಕ್ಷನ್ ಅಂಬೇಡ್ಕರ್ ವಾದಿಗಳೂ ಅಲ್ಲ. ಅಲ್ಲದೇ ತಾವು ಹೇಳಿಕೊಳ್ಳುವಂತೆ ತಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷದವರು ನಿಜವಾಗಿಯೂ ಅಂಬೇಡ್ಕರ್ ವಾದಿಗಳಾಗಿದ್ದಾರೆ ನೆಹರು ಅವರಾಗಲಿ, ಇಂದಿರಾ ಗಾಂಧಿ ಅವರಾಗಲಿ ಅಥವಾ ರಾಜೀವ್ ಗಾಂಧಿ ಅವರಾಗಲಿ ನೀಲಿ ಶಾಲು ಧರಿಸಿದ್ದ ಒಂದೇ ಒಂದು ಫೋಟೋ ತೋರಿಸಿ ನೋಡೋಣ ಎಂದು ಸವಾಲ್‌ ಹಾಕಿದ್ದಾರೆ.

ಪಾಪ ನಿಮ್ಮ ನಕಲಿ ಗಾಂಧಿ ಪಕ್ಷದ ಥರ್ಡ್ ಟೈಂ ಫೇಲ್ ಸ್ಟಾರ್ ಕಾಮಿಡಿಯನ್ ಚುನಾವಣೆ ಬಂದಾಗಲೆಲ್ಲಾ ಕೇಸರಿ ಬಟ್ಟೆ, ಕೇಸರಿ ಶಾಲು, ಹಣೆಗೆ ವಿಭೂತಿ, ಕುಂಕುಮ ಹಚ್ಚಿಕೊಂಡು ದೇವಸ್ಥಾನಕ್ಕೆ ಹೋಗುತ್ತಾರೆ. ಅದು ಹೋಗಲಿ ಬಿಡಿ, ತಾನು ಕೌಲ ದತ್ತಾತ್ರೇಯ ಗೋತ್ರದ ಬ್ರಾಹ್ಮಣ ಎಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ಮುತ್ತಜ್ಜ ನೆಹರೂ ಅವರಾಗಲಿ, ಅಜ್ಜಿ ಇಂದಿರಾ ಗಾಂಧಿ ಅವರಾಗಲಿ, ಅಪ್ಪ ರಾಜೀವ್ ಗಾಂಧಿ ಅವರಾಗಲಿ ಹಾಗೂ ಅಮ್ಮ ಸೋನಿಯಾ ಗಾಂಧಿ ಅವರಾಗಲಿ ಒಂದು ದಿನವೂ ಕೇಸರಿ, ಕುಂಕುಮ, ಗುಡಿ ಗೋಪುರಗಳ ಹತ್ತಿರವೂ ಸುಳಿದಿದ್ದನ್ನು ನಾನಂತೂ ಕಂಡಿಲ್ಲ. ನೀವೇನಾದರೂ ಕಂಡಿದ್ದರೆ ಒಂದು ಫೋಟೋ ತೋರಿಸಿ ಎಂದು ವಾಗ್ದಾಳಿ ಮಾಡಿದ್ದಾರೆ.

ಇನ್ನು ಅಂಬೇಡ್ಕರ್ ಅವರನ್ನ ನಿಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷ ಹೇಗೆ ನಡೆಸಿಕೊಂಡಿತು ಎಂದು ಮತ್ತೆ ಮತ್ತೆ ಹೇಳಬೇಕಾಗಿಲ್ಲ. ಇತ್ತೀಚೆಗೆ ಸಂಸತ್ತಿನಲ್ಲಿ ಸಂವಿಧಾನದ ಬಗ್ಗೆ ನಡೆದ ಚರ್ಚೆಯಲ್ಲಿ ಎಲ್ಲವೂ ಶಾಶ್ವತವಾಗಿ ದಾಖಲಾಗಿದೆ. ಕಂಟ್ರಾಕ್ಟರ್‌ಗಳ ಆತ್ಮಹತ್ಯೆ, ಡಿನ್ನರ್ ಮೀಟಿಂಗ್ ಇವೆಲ್ಲಾ ಗೊಜಲುಗಳಿಂದ ಬಿಡುವಿದ್ದಾಗ ಒಮ್ಮೆ ಆ ಚರ್ಚ್‌ಗಳನ್ನು ಓದಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಚುನಾವಣಾ ಭಾಷಣಗಳಲ್ಲಿ ಮೀಸಲಾತಿ ಪರವಾಗಿ ಮೊಸಳೆ ಕಣ್ಣೀರು ಸುರಿಸುವುದು, ವಿದೇಶಿ ವೇದಿಕೆಗಳಲ್ಲಿ ಮೀಸಲಾತಿ ವಿರುದ್ಧವಾಗಿ ಮಾತನಾಡುವ ಡೋಂಗಿ ಅಂಬೇಡ್ಕರ್ ವಾದ ಅಲ್ಲ ನಮ್ಮದು. ಬಾಬಾ ಸಾಹೇಬ್ ಅಂಬೇಡ್ಕರರ ಸಿದ್ಧಾಂತಕ್ಕೆ ಸಮನಾದ ಸಿದ್ಧಾಂತ ಯಾವುದಾದರೂ ಇದ್ದರೆ ಅದು ಬಿಜೆಪಿಯ ಏಕಾತ್ಮ ಮಾನವತಾವಾದ ಮತ್ತು ಅಂತ್ಯೋದಯ ಎಂದು ಹೇಳಿದ್ದಾರೆ.

ಮಹಾತ್ಮ ಗಾಂಧೀಜಿ ಅವರು ವಿಸರ್ಜನೆ ಮಾಡಬೇಕು ಅಂದ ಮೇಲೂ ಅಧಿಕಾರಕ್ಕಾಗಿ ಒಂದು ಕುಟುಂಬದ ಆಸ್ತಿಯಾಗಿ ಉಳಿದುಕೊಂಡಿರುವ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷದ ಏಕೈಕ ಸಿದ್ಧಾಂತ ಅಂದರೆ ಅದು ಅಧಿಕಾರವಾದ. ಅಧಿಕಾರಕ್ಕಾಗಿ ಲಜ್ಜೆ ಇಲ್ಲದ ಅವಕಾಶವಾದ. ಮಿಕ್ಕಿದ್ದೆಲ್ಲ ಬರೀ ಬೊಗಳೆ ಎಂದು ಆರೋಪಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

51 mins ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

2 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

5 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

5 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

5 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

5 hours ago