ರಾಜ್ಯ

ಬಿಜೆಪಿಯವರ ಕುರ್ಚಿ ಕಾಳಗ ಹೋರಾಟವೆಂಬ ಪ್ರಿಯಾಂಕ್‌ ಖರ್ಗೆ ಹೇಳಿಕೆ: ಆರ್‌.ಅಶೋಕ್‌ ತಿರುಗೇಟು

ಬೆಂಗಳೂರು: ಬಿಜೆಪಿ ಅವರು ನಿನ್ನೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಡೆಸಿದ ಹೋರಾಟಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆಯವರು, ಇಂದು ನಡೆದದ್ದು ಬಿಜೆಪಿಯವರ ಕುರ್ಚಿ ಕಾಳಗದ ಹೋರಾಟ ಎಂದು ಟ್ವೀಟ್‌ ಮೂಲಕ ಹೇಳಿಕೆ ನೀಡಿದ್ದರು. ಆದರೆ ಇದೀಗ ಅವರಿಗೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿರುಗೇಟು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಭಾರತೀಯತೆಯೂ ಇಲ್ಲದ, ರಾಷ್ಟ್ರೀಯತೆಯೂ ಇಲ್ಲದ ನಿಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷ ಕಳೆದ ಹತ್ತು ವರ್ಷಗಳಿಂದ ಈ ದೇಶದ ಅತೀ ದೊಡ್ಡ ಕಾಮಿಡಿ ಸಿನಿಮಾ ಆಗಿದೆ. ಈ ಸೂಪರ್ ಹಿಟ್ ಕಾಮಿಡಿ ಸಿನಿಮಾದ ಸ್ಟಾರ್ ಕಾಮಿಡಿಯನ್ ಯಾರು ಎಂದು ನಾನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ.

ಪಾಪ ನಿಮ್ಮ ತಂದೆಯವರು ಈ ಇಳಿ ವಯಸ್ಸಿನಲ್ಲೂ ಆ ಕಾಮಿಡಿ ಪೀಸ್‌ನ ಮಾನ ಉಳಿಸಲು ರಾಜ್ಯದಲ್ಲಿ ಸಿಗಬಹುದಾದ ಅಧಿಕಾರವನ್ನು ತ್ಯಾಗ ಮಾಡಿ ಅಲ್ಲಿ ಆ ಕಾಮಿಡಿ ಪೀಸ್‌ಗೆ ರಕ್ಷಣೆ ಕೊಡುತ್ತಿದ್ದಾರಲ್ಲ, ಈ ಶತಮಾನದ ನಿಜವಾದ ಕಟ್ಟಪ್ಪ ಅಂದರೆ ಅದು ನಿಮ್ಮ ತಂದೆಯವರೇ ಎಂದು ವ್ಯಂಗ್ಯವಾಡಿದ್ದಾರೆ.

ಅಂದಹಾಗೆ ಮೊನ್ನೆ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ 35 ಶಾಸಕರು ಸಭೆ ಸೇರಿದ್ದರಂತಲ್ಲ, ಅಲ್ಲಿ ತಾವು ಇದ್ದರೋ? ಅಥವಾ ಆತ್ಮಹತ್ಯೆಗೆ ಕಾರಣವಾದರೂ ಸರಿ, ಕೊಲೆ ಮಾಡಿದರೂ ಸರಿ, ಎಐಸಿಸಿ ಅಧ್ಯಕ್ಷರ ಕೋಟಾದಲ್ಲಿ ತಮ್ಮ ಕುರ್ಚಿ ಮಾತ್ರ ಸುಭದ್ರ ಎಂದು ಯಾವ ಬಣಕ್ಕೂ ಸೇರದೆ ತಟಸ್ಥರಾಗಿರುವ ನಿರ್ಧಾರ ಮಾಡಿದ್ದೀರೋ? ಎಂದು ಪ್ರಶ್ನಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

51 mins ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

1 hour ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

2 hours ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

2 hours ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

2 hours ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

3 hours ago