ರಾಜ್ಯ

ಬಿಜೆಪಿಯವರ ಕುರ್ಚಿ ಕಾಳಗ ಹೋರಾಟವೆಂಬ ಪ್ರಿಯಾಂಕ್‌ ಖರ್ಗೆ ಹೇಳಿಕೆ: ಆರ್‌.ಅಶೋಕ್‌ ತಿರುಗೇಟು

ಬೆಂಗಳೂರು: ಬಿಜೆಪಿ ಅವರು ನಿನ್ನೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಡೆಸಿದ ಹೋರಾಟಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆಯವರು, ಇಂದು ನಡೆದದ್ದು ಬಿಜೆಪಿಯವರ ಕುರ್ಚಿ ಕಾಳಗದ ಹೋರಾಟ ಎಂದು ಟ್ವೀಟ್‌ ಮೂಲಕ ಹೇಳಿಕೆ ನೀಡಿದ್ದರು. ಆದರೆ ಇದೀಗ ಅವರಿಗೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿರುಗೇಟು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಭಾರತೀಯತೆಯೂ ಇಲ್ಲದ, ರಾಷ್ಟ್ರೀಯತೆಯೂ ಇಲ್ಲದ ನಿಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷ ಕಳೆದ ಹತ್ತು ವರ್ಷಗಳಿಂದ ಈ ದೇಶದ ಅತೀ ದೊಡ್ಡ ಕಾಮಿಡಿ ಸಿನಿಮಾ ಆಗಿದೆ. ಈ ಸೂಪರ್ ಹಿಟ್ ಕಾಮಿಡಿ ಸಿನಿಮಾದ ಸ್ಟಾರ್ ಕಾಮಿಡಿಯನ್ ಯಾರು ಎಂದು ನಾನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ.

ಪಾಪ ನಿಮ್ಮ ತಂದೆಯವರು ಈ ಇಳಿ ವಯಸ್ಸಿನಲ್ಲೂ ಆ ಕಾಮಿಡಿ ಪೀಸ್‌ನ ಮಾನ ಉಳಿಸಲು ರಾಜ್ಯದಲ್ಲಿ ಸಿಗಬಹುದಾದ ಅಧಿಕಾರವನ್ನು ತ್ಯಾಗ ಮಾಡಿ ಅಲ್ಲಿ ಆ ಕಾಮಿಡಿ ಪೀಸ್‌ಗೆ ರಕ್ಷಣೆ ಕೊಡುತ್ತಿದ್ದಾರಲ್ಲ, ಈ ಶತಮಾನದ ನಿಜವಾದ ಕಟ್ಟಪ್ಪ ಅಂದರೆ ಅದು ನಿಮ್ಮ ತಂದೆಯವರೇ ಎಂದು ವ್ಯಂಗ್ಯವಾಡಿದ್ದಾರೆ.

ಅಂದಹಾಗೆ ಮೊನ್ನೆ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ 35 ಶಾಸಕರು ಸಭೆ ಸೇರಿದ್ದರಂತಲ್ಲ, ಅಲ್ಲಿ ತಾವು ಇದ್ದರೋ? ಅಥವಾ ಆತ್ಮಹತ್ಯೆಗೆ ಕಾರಣವಾದರೂ ಸರಿ, ಕೊಲೆ ಮಾಡಿದರೂ ಸರಿ, ಎಐಸಿಸಿ ಅಧ್ಯಕ್ಷರ ಕೋಟಾದಲ್ಲಿ ತಮ್ಮ ಕುರ್ಚಿ ಮಾತ್ರ ಸುಭದ್ರ ಎಂದು ಯಾವ ಬಣಕ್ಕೂ ಸೇರದೆ ತಟಸ್ಥರಾಗಿರುವ ನಿರ್ಧಾರ ಮಾಡಿದ್ದೀರೋ? ಎಂದು ಪ್ರಶ್ನಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

8 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

8 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

9 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

11 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

12 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

12 hours ago