ಬೆಳಗಾವಿ: ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವ ಪೊಲೀಸರ ಕ್ರಮ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ.
ವಿಧಾನಸಭೆ ಅಧಿವೇಶನದಲ್ಲಿ ಗದ್ದಲ, ಕೋಲಾಹಲ ಜಾಸ್ತಿಯಾಗುತ್ತಿದ್ದಂತೆಯೇ ಸ್ಪೀಕರ್ ಯು.ಟಿ.ಖಾದರ್ ಅವರು ಕಲಾಪವನ್ನು ಮುಂದೂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸ್ಪೀಕರ್ ನಡೆಗೆ ವಿಪಕ್ಷ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ಯಪಡಿಸಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸ್ಪೀಕರ್ ಯು.ಟಿ.ಖಾದರ್ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಬಗ್ಗೆ ಚರ್ಚೆ ನಡೆಸಲು ಅವಕಾಶ ಕೊಟ್ಟಿಲ್ಲ. ಬೇರೆ ವಿಷಯಗಳ ಚರ್ಚೆಗೆ ಅವಕಾಶ ನೀಡಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಮನಸೋ ಇಚ್ಛೆ ಅಧಿವೇಶನ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಲಾಠಿ ಚಾರ್ಜ್ ಬಗ್ಗೆ ಚರ್ಚೆಯಾಗಲೇಬೇಕು. ಅದನ್ನು ಬಿಟ್ಟು ಬೇರೆ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುತ್ತಿದ್ದಾರೆ. ಪಾಯಿಂಟ್ ಆಫ್ ಆರ್ಡರ್ ಎತ್ತಿದರೂ ಗಮನ ಹರಿಸುತ್ತಿಲ್ಲ ಎಂದು ಸ್ಪೀಕರ್ ವಿರುದ್ಧ ವಾಗ್ದಾಳಿ ನಡೆಸಿದರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…