Categories: ರಾಜ್ಯ

ಕಾಂಗ್ರೆಸ್‌ ಪಕ್ಷದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್‌ ವ್ಯಂಗ್ಯ

ಬೆಂಗಳೂರು: ಹಣದ ಹೊಳೆ ಹರಿಸಿ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಉಪಚುನಾವಣೆ ಗೆದ್ದ ಮಾತ್ರಕ್ಕೆ ಮೂರು ಲೋಕವನ್ನೇ ಗೆದ್ದು ಬಿಟ್ಟೆವು ಎಂಬ ಭ್ರಮೆಯಲ್ಲಿದೆ ಕಾಂಗ್ರೆಸ್‌ ಪಕ್ಷ ಎಂದು ಲೇವಡಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ ಯಾವುದು ಸುಳ್ಳು, ಯಾವುದು ಅಪಪ್ರಚಾರ ಎಂದು ಪ್ರಶ್ನಿಸಿರುವ ಅಶೋಕ್‌ ಅವರು, ವಾಲ್ಮೀಕಿ ನಿಗಮದಲ್ಲಿ ಕೋಟಿ ಕೋಟಿ ಹಣ ಅವ್ಯವಹಾರ ಆಗಿದೆ ಎಂದು ತಾವೇ ಒಪ್ಪಿಕೊಂಡಿದ್ದೀರಿ.

ಇನ್ನು ಮುಡಾ ಹಗರಣದಲ್ಲಿ ತಮ್ಮ ಪತ್ನಿಯವರ ಹೆಸರಿನಲ್ಲಿರುವ 14 ಸೈಟು ವಾಪಸ್ಸು ಕೊಡುವ ಮೂಲಕ ಪರೋಕ್ಷವಾಗಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದೀರಲ್ಲ ಅದು ಸುಳ್ಳಾ ಎಂದು ಮತ್ತೊಮ್ಮೆ ಪ್ರಶ್ನೆ ಮಾಡಿದರು.

ತಮ್ಮ ಸರ್ಕಾರದ ಭ್ರಷ್ಟಾಚಾರಕ್ಕೆ, ಕಿರುಕುಳಕ್ಕೆ ಈವರೆಗೂ ನಾಲ್ಕು ಜನ ಪ್ರಾಮಾಣಿಕ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ಗುತ್ತಿಗೆದಾರರು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ಸುಳ್ಳಾ? ನಿಮ್ಮ ಈ ಕುತಂತ್ರ, ಷಡ್ಯಂತ್ರ, ನಾಟಕ ಜಾಸ್ತಿ ದಿನ ನಡೆಯಲ್ಲ. ತಡವಾದರೂ ಸತ್ಯಕ್ಕೆ ಎಂದಿಗೂ ಜಯ ಸಿಗುತ್ತದೆ ಎಂದು ವಾಗ್ದಾಳಿ ನಡೆಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

2 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

2 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

2 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

3 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

3 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago