ಬೆಂಗಳೂರು: ಹಣದ ಹೊಳೆ ಹರಿಸಿ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಉಪಚುನಾವಣೆ ಗೆದ್ದ ಮಾತ್ರಕ್ಕೆ ಮೂರು ಲೋಕವನ್ನೇ ಗೆದ್ದು ಬಿಟ್ಟೆವು ಎಂಬ ಭ್ರಮೆಯಲ್ಲಿದೆ ಕಾಂಗ್ರೆಸ್ ಪಕ್ಷ ಎಂದು ಲೇವಡಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ ಯಾವುದು ಸುಳ್ಳು, ಯಾವುದು ಅಪಪ್ರಚಾರ ಎಂದು ಪ್ರಶ್ನಿಸಿರುವ ಅಶೋಕ್ ಅವರು, ವಾಲ್ಮೀಕಿ ನಿಗಮದಲ್ಲಿ ಕೋಟಿ ಕೋಟಿ ಹಣ ಅವ್ಯವಹಾರ ಆಗಿದೆ ಎಂದು ತಾವೇ ಒಪ್ಪಿಕೊಂಡಿದ್ದೀರಿ.
ಇನ್ನು ಮುಡಾ ಹಗರಣದಲ್ಲಿ ತಮ್ಮ ಪತ್ನಿಯವರ ಹೆಸರಿನಲ್ಲಿರುವ 14 ಸೈಟು ವಾಪಸ್ಸು ಕೊಡುವ ಮೂಲಕ ಪರೋಕ್ಷವಾಗಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದೀರಲ್ಲ ಅದು ಸುಳ್ಳಾ ಎಂದು ಮತ್ತೊಮ್ಮೆ ಪ್ರಶ್ನೆ ಮಾಡಿದರು.
ತಮ್ಮ ಸರ್ಕಾರದ ಭ್ರಷ್ಟಾಚಾರಕ್ಕೆ, ಕಿರುಕುಳಕ್ಕೆ ಈವರೆಗೂ ನಾಲ್ಕು ಜನ ಪ್ರಾಮಾಣಿಕ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ಗುತ್ತಿಗೆದಾರರು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ಸುಳ್ಳಾ? ನಿಮ್ಮ ಈ ಕುತಂತ್ರ, ಷಡ್ಯಂತ್ರ, ನಾಟಕ ಜಾಸ್ತಿ ದಿನ ನಡೆಯಲ್ಲ. ತಡವಾದರೂ ಸತ್ಯಕ್ಕೆ ಎಂದಿಗೂ ಜಯ ಸಿಗುತ್ತದೆ ಎಂದು ವಾಗ್ದಾಳಿ ನಡೆಸಿದರು.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…