R Ashok
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ. ರಾಜ್ಯ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಂದ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. ಮತ್ತೆ ಖಾಲಿ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರಿಂದ ಮಾರ್ಚ್ 11 ರಿಂದ ಒಪಿಡಿ ಬಂದ್ ಮಾಡಲಾಗುತ್ತದೆ. 37,000 ಕೋಟಿ ರೂ. ಬಾಕಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಾರ್ಚ್ 6 ರಂದು ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುತ್ತದೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಬಂಜಾರ, ಭೋವಿ, ಕೊರಮ, ಕೊರಚ ಮತ್ತು ಅಲೆಮಾರಿ ಸಮುದಾಯಗಳ ಪ್ರತಿಭಟನೆ ನಡೆಯಲಿದೆ. ಬಿಡದಿ ಟೌನ್ಶಿಪ್ ಯೋಜನೆ, ಸೆಣಬು ಸಬ್ಸಿಡಿ ಬಂದ್, ಕಬ್ಬು ಬಿಲ್ ಬಾಕಿ ವಿರುದ್ಧ ರೈತರಿಂದ ಬೀದಿಳಿಗಿದು ಪ್ರತಿಭಟನೆ ನಡೆಸಲಾಗುತ್ತಿದೆ. ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಫೆಬ್ರವರಿ 27 ರಿಂದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ. 38 ತಿಂಗಳ ಹಿಂಬಾಕಿಗಾಗಿ ಸಾರಿಗೆ ನೌಕರರಿಂದ ಮುಷ್ಕರ ನಡೆಯಲಿದೆ. ಅರಾಜಕ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ ಸಾಕ್ಷಿ ಬೇಕೆ? ಇಡೀ ಕರ್ನಾಟಕ ಇಂದು ಅರಾಜಕತೆಯಲ್ಲಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…
ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…
ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…
ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…