R Ashok
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ. ರಾಜ್ಯ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಂದ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. ಮತ್ತೆ ಖಾಲಿ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರಿಂದ ಮಾರ್ಚ್ 11 ರಿಂದ ಒಪಿಡಿ ಬಂದ್ ಮಾಡಲಾಗುತ್ತದೆ. 37,000 ಕೋಟಿ ರೂ. ಬಾಕಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಾರ್ಚ್ 6 ರಂದು ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುತ್ತದೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಬಂಜಾರ, ಭೋವಿ, ಕೊರಮ, ಕೊರಚ ಮತ್ತು ಅಲೆಮಾರಿ ಸಮುದಾಯಗಳ ಪ್ರತಿಭಟನೆ ನಡೆಯಲಿದೆ. ಬಿಡದಿ ಟೌನ್ಶಿಪ್ ಯೋಜನೆ, ಸೆಣಬು ಸಬ್ಸಿಡಿ ಬಂದ್, ಕಬ್ಬು ಬಿಲ್ ಬಾಕಿ ವಿರುದ್ಧ ರೈತರಿಂದ ಬೀದಿಳಿಗಿದು ಪ್ರತಿಭಟನೆ ನಡೆಸಲಾಗುತ್ತಿದೆ. ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಫೆಬ್ರವರಿ 27 ರಿಂದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ. 38 ತಿಂಗಳ ಹಿಂಬಾಕಿಗಾಗಿ ಸಾರಿಗೆ ನೌಕರರಿಂದ ಮುಷ್ಕರ ನಡೆಯಲಿದೆ. ಅರಾಜಕ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ ಸಾಕ್ಷಿ ಬೇಕೆ? ಇಡೀ ಕರ್ನಾಟಕ ಇಂದು ಅರಾಜಕತೆಯಲ್ಲಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…