ಬೆಳಗಾವಿ: ವಕ್ಫ್ ಹೆಸರಿನಲ್ಲಿ ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ವಿಪಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್ ಬ್ರಿಟೀಷರ ಒಡೆದು ಆಳುವ ನೀತಿಯನ್ನು ಅಳವಡಿಸಿಕೊಂಡು ಹಿಂದೂ-ಮುಸ್ಲಿಂರ ನಡುವೆ ಬಿರುಕು ಮೂಡಿಸುತ್ತಿದೆ.
ಹಿಂದೂಗಳ ಆಸ್ತಿಯನ್ನು ಕಾಂಗ್ರೆಸ್ ಒಡೆಯುತ್ತಿದೆ. ಸಮಾಜದಲ್ಲಿ ಕಾಂಗ್ರೆಸ್ ವಕ್ಫ್ ಮೂಲಕ ಸಾಮರಸ್ಯ ಕೆಡಿಸುತ್ತಿದೆ. ವಕ್ಫ್ ನೋಟಿಸ್, ಪಹಣಿ ಗೊಂದಲ ನಿವಾರಣೆ ಮಾಡಬೇಕು. ಆಯಾಯ ರೈತರ ಹೆಸರಿಗೆ ಮತ್ತೆ ಪಹಣಿ ಬದಲಾವಣೆ ಆಗಬೇಕು. 1974ರ ವಕ್ಫ್ ಗೆಜೆಟ್ ಅಧಿಸೂಚನೆ ವಾಪಸ್ಸು ಪಡೆಯಬೇಕು. ಕೇಂದ್ರದ ವಕ್ಫ್ ತಿದ್ದುಪಡಿ ನಿಯಮಾವಳಿಗಳನ್ನು ನಮ್ಮ ರಾಜ್ಯ ಸರಳ ಬಹುಮತದಲ್ಲಿ ಪಾಸ್ ಮಾಡಬೇಕು ಎಂದು ಆಗ್ರಹಿಸಿದರು.
ಇನ್ನು ವಕ್ಫ್ ಬೋರ್ಡ್ ಮೂಲಕ ಕಾಂಗ್ರೆಸ್ ಸರ್ಕಾರವು ಹಿಂದೂಗಳ ಭೂಮಿ, ದೇವಸ್ಥಾನಗಳು ಮತ್ತು ಸ್ಮಶಾನ ಭೂಮಿಯನ್ನು ಕಬಳಿಸುತ್ತಿದೆ. ಬ್ರಿಟಿಷರ ಒಡೆದು ಆಳುವ ನೀತಿಯನ್ನು ಕಾಂಗ್ರೆಸ್ ಅನುಸರಿಸುತ್ತಿದ್ದು, ಹಿಂದು-ಮುಸಲ್ಮಾನರ ನಡುವೆ ಕೋಮು ಸೌಹಾರ್ದತೆ ಸೃಷ್ಟಿಸುತ್ತಿದೆ. ರೈತರ ಪಹಣಿಗಳಲ್ಲಿ ವಕ್ಫ್ ಎಂಬ ಉಲ್ಲೇಖವನ್ನು ತೆಗೆದುಹಾಕಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಐತಿಹಾಸಿಕ ದೇವಾಲಯಗಳು, ಗೋಮಾಳಗಳು, ಶಾಲೆಗಳು ಮತ್ತು ಸಮಾಧಿ ಸ್ಥಳಗಳು ವಕ್ಫ್ ಆಸ್ತಿಯಾಗುತ್ತಿವೆ. ರಾತ್ರೋರಾತ್ರಿ ಪಹಣಿಗಳು ಬದಲಾಗುತ್ತಿವೆ ಎಂದು ಆರೋಪಿಸಿದರು.
ಇನ್ನು ವಕ್ಫ್ನಿಂದ ರೈತರಿಗೆ ನೋಟಿಸ್ ವಿಚಾರವಾಗಿ ಸದನದಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ನನ್ನ ನಡುವೆ ವಾಕ್ಸಮರ ನಡೆದಿದೆ. ವಕ್ಫ್ ಬೋರ್ಡ್ ನೋಟಿಸ್ ಕೊಟ್ಟಿರೋದು ತಪ್ಪಿಲ್ಲ ಅಂದರೆ ನಾನು ಪ್ರತಿಪಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರಗೆ ನಿಲ್ಲುತ್ತೇನೆ. ಬೇಕಿದ್ರೆ ಸ್ಪೀಕರ್ ನನಗೆ ಛೀಮಾರಿ ಹಾಕಲಿ ಎಂದು ಸವಾಲು ಹಾಕಿದರು.
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…