ಬೆಳಗಾವಿ: ವಕ್ಫ್ ಹೆಸರಿನಲ್ಲಿ ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ವಿಪಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್ ಬ್ರಿಟೀಷರ ಒಡೆದು ಆಳುವ ನೀತಿಯನ್ನು ಅಳವಡಿಸಿಕೊಂಡು ಹಿಂದೂ-ಮುಸ್ಲಿಂರ ನಡುವೆ ಬಿರುಕು ಮೂಡಿಸುತ್ತಿದೆ.
ಹಿಂದೂಗಳ ಆಸ್ತಿಯನ್ನು ಕಾಂಗ್ರೆಸ್ ಒಡೆಯುತ್ತಿದೆ. ಸಮಾಜದಲ್ಲಿ ಕಾಂಗ್ರೆಸ್ ವಕ್ಫ್ ಮೂಲಕ ಸಾಮರಸ್ಯ ಕೆಡಿಸುತ್ತಿದೆ. ವಕ್ಫ್ ನೋಟಿಸ್, ಪಹಣಿ ಗೊಂದಲ ನಿವಾರಣೆ ಮಾಡಬೇಕು. ಆಯಾಯ ರೈತರ ಹೆಸರಿಗೆ ಮತ್ತೆ ಪಹಣಿ ಬದಲಾವಣೆ ಆಗಬೇಕು. 1974ರ ವಕ್ಫ್ ಗೆಜೆಟ್ ಅಧಿಸೂಚನೆ ವಾಪಸ್ಸು ಪಡೆಯಬೇಕು. ಕೇಂದ್ರದ ವಕ್ಫ್ ತಿದ್ದುಪಡಿ ನಿಯಮಾವಳಿಗಳನ್ನು ನಮ್ಮ ರಾಜ್ಯ ಸರಳ ಬಹುಮತದಲ್ಲಿ ಪಾಸ್ ಮಾಡಬೇಕು ಎಂದು ಆಗ್ರಹಿಸಿದರು.
ಇನ್ನು ವಕ್ಫ್ ಬೋರ್ಡ್ ಮೂಲಕ ಕಾಂಗ್ರೆಸ್ ಸರ್ಕಾರವು ಹಿಂದೂಗಳ ಭೂಮಿ, ದೇವಸ್ಥಾನಗಳು ಮತ್ತು ಸ್ಮಶಾನ ಭೂಮಿಯನ್ನು ಕಬಳಿಸುತ್ತಿದೆ. ಬ್ರಿಟಿಷರ ಒಡೆದು ಆಳುವ ನೀತಿಯನ್ನು ಕಾಂಗ್ರೆಸ್ ಅನುಸರಿಸುತ್ತಿದ್ದು, ಹಿಂದು-ಮುಸಲ್ಮಾನರ ನಡುವೆ ಕೋಮು ಸೌಹಾರ್ದತೆ ಸೃಷ್ಟಿಸುತ್ತಿದೆ. ರೈತರ ಪಹಣಿಗಳಲ್ಲಿ ವಕ್ಫ್ ಎಂಬ ಉಲ್ಲೇಖವನ್ನು ತೆಗೆದುಹಾಕಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಐತಿಹಾಸಿಕ ದೇವಾಲಯಗಳು, ಗೋಮಾಳಗಳು, ಶಾಲೆಗಳು ಮತ್ತು ಸಮಾಧಿ ಸ್ಥಳಗಳು ವಕ್ಫ್ ಆಸ್ತಿಯಾಗುತ್ತಿವೆ. ರಾತ್ರೋರಾತ್ರಿ ಪಹಣಿಗಳು ಬದಲಾಗುತ್ತಿವೆ ಎಂದು ಆರೋಪಿಸಿದರು.
ಇನ್ನು ವಕ್ಫ್ನಿಂದ ರೈತರಿಗೆ ನೋಟಿಸ್ ವಿಚಾರವಾಗಿ ಸದನದಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ನನ್ನ ನಡುವೆ ವಾಕ್ಸಮರ ನಡೆದಿದೆ. ವಕ್ಫ್ ಬೋರ್ಡ್ ನೋಟಿಸ್ ಕೊಟ್ಟಿರೋದು ತಪ್ಪಿಲ್ಲ ಅಂದರೆ ನಾನು ಪ್ರತಿಪಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರಗೆ ನಿಲ್ಲುತ್ತೇನೆ. ಬೇಕಿದ್ರೆ ಸ್ಪೀಕರ್ ನನಗೆ ಛೀಮಾರಿ ಹಾಕಲಿ ಎಂದು ಸವಾಲು ಹಾಕಿದರು.
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…