Mysore
20
overcast clouds
Light
Dark

ಸ್ವಾಮೀಜಿಗಳೇ ಹೇಳಿದರೋ ಅಥವಾ ಡಿಕೆಶಿನೇ ಹೇಳಿಸಿದ್ದಾರೋ ಗೊತ್ತಿಲ್ಲ : ಆರ್ ಅಶೋಕ್

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಗೆ ಸಿಎಂ ಸ್ಥಾನ ನೀಡಲು ಚಂದ್ರಶೇಖರಶ್ರೀ ಹೇಳಿಕೆ ವಿಚಾರಕ್ಕೆ  ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್‌ ಆಶೋಕ್‌ ಪ್ರತಿಕ್ರಿಯೆ ನೀಡಿದ್ದು, ಸ್ವಾಮೀಜಿಗಳೇ  ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್‌ ಹೇಳಿಸಿದರೋ ಗೊತ್ತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರು.

ಡಿಕೆ ಶಿವಕುಮಾರ್ ​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಹೇಳಿಕೆ ನೀಡಿದ್ದರು. ಈ  ವಿಚಾರವಾಗಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಎಂದು ಆಗಿರಲಿಲ್ಲ. ಮೊದಲ ಬಾರಿಗೆ ಸಿಎಂ ಎದುರಿಗೆ ನೀವು ರಾಜೀನಾಮೆ ನೀಡಿ ಎಂದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಿ. ಇಷ್ಟು ಅವಮಾನ ಆಗಿಯೂ ಸಿಎಂ ಆಗಿ ಮುಂದುವರಿಯಬಾರದು ಎಂದು ಕಿಡಿಕಾರಿದ್ರು.