R Ashok steps down as Opposition Leader even before Dussehra
ಬೆಂಗಳೂರು: ದಸರಾಗೂ ಮೊದಲೇ ವಿಪಕ್ಷ ನಾಯಕ ಆರ್.ಅಶೋಕ್ ಸ್ಥಾನಕ್ಕೆ ಸಂಚಕಾರ ಬರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿದ್ದು, ಕಾಂಗ್ರೆಸ್ ಶಾಸಕರು ದಿನದಿಂದ ದಿನಕ್ಕೆ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.
ಈ ಮಧ್ಯೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದರು.
ಆರ್.ಅಶೋಕ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಹಾಗೂ ವಿಪಕ್ಷ ನಾಯಕ ಬದಲಾವಣೆ ಚರ್ಚೆಗಳು ನಡೆಯುತ್ತಿವೆ ಎಂದು ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಕ್ಷಿಪ್ರ ಕ್ರಾಂತಿ ಕಾಂಗ್ರೆಸ್ನಲ್ಲಿ ಆಗಲ್ಲ, ಬಿಜೆಪಿಯಲ್ಲಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ಆಂತರಿಕ ಕಲಹವೇ ಆರ್.ಅಶೋಕ್ ಅವರ ದೆಹಲಿ ಭೇಟಿಗೆ ಕಾರಣವಾಗಿದೆ. ದಸರಾಗೂ ಮೊದಲೇ ವಿಪಕ್ಷ ನಾಯಕ ಸ್ಥಾನ ಬದಲಾಗುತ್ತದೆ. ಅದೇ ಕಾರಣಕ್ಕೂ ಅವರು ದೆಹಲಿಗೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…