ರಾಜ್ಯ

ಬೆಂಗಳೂರು ಒಡೆದರೆ ಕಾನೂನು ಹೋರಾಟ ; ಕಾಂಗ್ರೆಸ್‌ಗೆ ಅಶೋಕ ಎಚ್ಚರಿಕೆ

ಬೆಂಗಳೂರನ್ನು ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಮೂರು ಭಾಗ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕಿಡಿಕಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿದ್ದು ಮಾತನಾಡಿದ ಅವರು, ಗ್ರೇಟರ್‌ ಬೆಂಗಳೂರಿನಿಂದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. 110 ಹಳ್ಳಿಗಳಲ್ಲಿ ಜನರಿಗೆ ಹೆಚ್ಚು ತೆರಿಗೆ ವಿಧಿಸಲಾಗಿದೆ. ಯಾರದ್ದೋ ಜಮೀನಿಗೆ ಬೆಲೆ ಹೆಚ್ಚುವಂತೆ ಮಾಡಲು ಇಂತಹ ಯೋಜನೆ ರೂಪಿಸಲಾಗಿದೆ. ಇದರಿಂದಾಗಿ ಕೆಂಪೇಗೌಡರ ಚಿಂತನೆಗೆ ದ್ರೋಹ ಬಗೆದಂತಾಗಿದೆ. ಬೆಂಗಳೂರು ಭಾಗವಾದರೆ ಆದಾಯ ಬರುವುದಿಲ್ಲ. ಐಟಿ ಬಿಟಿ ಕೇಂದ್ರಗಳು ಒಂದು ಕಡೆ ಇರುವಾಗ, ಮತ್ತೊಂದು ಕಡೆಗೆ ಆದಾಯವೇ ಬರುವುದಿಲ್ಲ. ಮೂರು ಪಾಲಿಕೆಗಳು ನಿರ್ಮಾಣವಾದರೆ ಅಲ್ಲಿ ಕನ್ನಡಿಗರೇ ಮೇಯರ್‌ ಆಗುತ್ತಾರೆ ಎಂಬ ಖಚಿತತೆ ಇಲ್ಲ ಎಂದರು.

ಮುಖ್ಯಮಂತ್ರಿಗಳು ಪಾಲಿಕೆಯಿಂದ ಆಯ್ಕೆಯಾಗುವುದಿಲ್ಲ ಎಂದಾದ ಮೇಲೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಅವರನ್ನು ಹೇಗೆ ಅಧ್ಯಕ್ಷರನ್ನಾಗಿ ಮಾಡುತ್ತಾರೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಕೆ ಸಭೆಯಲ್ಲಿ ಬಂದು ಕೂರಲು ಸಾಧ್ಯವಿಲ್ಲ. ಬೆಂಗಳೂರು ಭಾಗ ಆಗಬಾರದು ಎಂಬುದು ಬಿಜೆಪಿಯ ಅಭಿಪ್ರಾಯ. ಮುಂದೆ ನಮ್ಮ ಸರ್ಕಾರ ಬಂದರೆ ಬೆಂಗಳೂರನ್ನು ಒಂದು ಮಾಡುವ ಕೆಲಸ ಮಾಡುತ್ತೇವೆ. ಗ್ರೇಟರ್‌ ಬೆಂಗಳೂರಿಗೆ ವಿರುದ್ಧವಾಗಿ ಕಾನೂನು ಹೋರಾಟ ಮಾಡಲಿದ್ದೇವೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ಲಾಭಕ್ಕೆ ಎಲ್ಲವನ್ನೂ ಮಾಡುತ್ತಿದ್ದಾರೆ. ಬಿಡಿಎ ಲೇಔಟ್‌ಗಳು ಇನ್ನೂ ಖಾಲಿ ಇದ್ದು, ಅಲ್ಲಿಗೆ ನೀರು, ವಿದ್ಯುತ್‌ ಕೊಡಲು ಆಗುತ್ತಿಲ್ಲ. ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಈ ಯೋಜನೆ ಮಾಡಿದ್ದಾರೆ. ನಗರದಲ್ಲಿ ಎಲ್ಲ ಕಡೆ ಕಸದ ರಾಶಿ ಇದೆ, ಮೇಕೆದಾಟು ಯೋಜನೆ ಜಾರಿ ಮಾಡಿಲ್ಲ, ನಗರದ ಆಡಳಿತ ನಡೆಸಲು ಆಗುತ್ತಿಲ್ಲ. ಇಂತಹ ವಿಫಲತೆಯನ್ನು ಒಪ್ಪಿಕೊಳ್ಳದೆ ಇಂತಹ ಯೋಜನೆ ತಂದಿದ್ದಾರೆ ಎಂದು ಟೀಕಿಸಿದರು.

ಆಂದೋಲನ ಡೆಸ್ಕ್

Recent Posts

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

57 mins ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

1 hour ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

2 hours ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

2 hours ago

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

3 hours ago